2018ರಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಚೆಲಮೇಶ್ವರ್, ರಂಜನ್ ಗೊಗೊಯ್, ಮದನ್ ಬಿ ಲೋಕುರ್ ಮತ್ತು ಕುರಿಯನ್ ಜೋಸೆಫ್ 
ದೇಶ

ಗೊಗೊಯಿ ನ್ಯಾಯಾಂಗದ ಸ್ವಾಯತ್ತತೆ ವಿಚಾರದಲ್ಲಿ ರಾಜಿ ಮಾಡಿಕೊಂಡಿದ್ದಾರೆ: ಸುಪ್ರೀಂ ನಿವೃತ್ತ ನ್ಯಾಯಾಧೀಶ ಕುರಿಯನ್

ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ರಾಜ್ಯಸಭಾ ಸದಸ್ಯ ಸ್ಥಾನವನ್ನು ಒಪ್ಪಿಕೊಳ್ಳುವ ಮೂಲಕ ನ್ಯಾಯಾಂಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತತೆಯ ವಿಚಾರದಲ್ಲಿನ ಪ್ರಧಾನ ತತ್ವಗಳೊಂದಿಗೆ ರಾಜಿ...

ನವದೆಹಲಿ: ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ರಾಜ್ಯಸಭಾ ಸದಸ್ಯ ಸ್ಥಾನವನ್ನು ಒಪ್ಪಿಕೊಳ್ಳುವ ಮೂಲಕ ನ್ಯಾಯಾಂಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತತೆಯ ವಿಚಾರದಲ್ಲಿನ ಪ್ರಧಾನ ತತ್ವಗಳೊಂದಿಗೆ ರಾಜಿ ಮಾಡಿಕೊಂಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾದೀಶ ಕುರಿಯನ್ ಜೋಸೆಫ್ ಅವರು ಕಟುವಾಗಿ ಟೀಕಿಸಿದ್ದಾರೆ.

ಈ ಹಿಂದೆ 2018ರ ಜನವರಿ 12ರಂದು ಪ್ರತಿಕಾಗೋಷ್ಠಿ ನಡೆಸಿ ದೇಶದ ನ್ಯಾಯಾಂಗ ವ್ಯವಸ್ಥೆಯೊಳಗಿನ ಹುಳುಕನ್ನು ಬಹಿರಂಗಪಡಿಸಿದ್ದ ನಾಲ್ವರು ನ್ಯಾಯಮೂರ್ತಿಗಳಲ್ಲಿ ರಂಜನ್‌ ಗೊಗೊಯಿ ಅವರೂ ಒಬ್ಬರು. ಆದರೆ ಈಗ ಅವರು ರಾಜ್ಯಸಭಾ ಸದಸ್ಯ ಸ್ಥಾನ ಒಪ್ಪಿಕೊಂಡಿರುವುದು ಆಶ್ಚರ್ಯವಾಗುತ್ತಿದೆ ಎಂದು ಕುರಿಯನ್ ಜೋಸೆಫ್ ಅವರು ಪ್ರತಿಕ್ರಿಯಿಸಿದ್ದಾರೆ.

ನನ್ನ ಪ್ರಕಾರ, ಒಬ್ಬ ನಿವೃತ್ತ ಸಿಜೆಐ ರಾಜ್ಯಸಭಾ ಸ್ಥಾನ ಒಪ್ಪಿಕೊಂಡಿರುವುದು ನ್ಯಾಯಾಂಗದ ಸ್ವಾಯತ್ತತೆ ಬಗ್ಗೆ ಸಾಮಾನ್ಯ ಜನರ ವಿಶ್ವಾಸಕ್ಕೆ ಖಂಡಿತವಾಗಿಯೂ ಧಕ್ಕೆಯಾಗಿದೆ. ಇದು ಭಾರತದ ಸಂವಿಧಾನದ ಮೂಲ ರಚನೆಗಳಲ್ಲಿ ಒಂದಾಗಿದೆ ಎಂದು ಕುರಿಯನ್ ಅವರು ಹೇಳಿದ್ದಾರೆ.

2018ರಲ್ಲಿ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಗೊಗೊಯಿ ಅವರ ಅಂದಿನ ಹೇಳಿಕೆಯನ್ನು ನೆನಪಿಸಿಕೊಂಡ ನಿವೃತ್ತ ನ್ಯಾಯಾಧೀಶ, ಇಂದು ಅವರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ನಿನ್ನೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ವ್ಯಾಪಕವಾಗಿ ಟೀಕಿಸುತ್ತಿದ್ದಾರೆ. 

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಗೊಗೊಯ್ ಅವರು, ನಾನು ಬಹುಶಃ ನಾಳೆ ದೆಹಲಿಗೆ ಹೋಗುತ್ತೇನೆ. ಅಲ್ಲಿ ಮೊದಲು ಪ್ರಮಾಣವಚನ ಸ್ವೀಕರಿಸಿ ನಂತರ ನಾನು ಮಾಧ್ಯಮಗಳ ಜೊತೆ ವಿವರವಾಗಿ ಮಾತನಾಡುತ್ತೇನೆ ಎಂದು ಗುವಾಹಟಿಯಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!