ದೇಶ

ಜ್ಯೋತಿರಾದಿತ್ಯ ಸಿಂಧಿಯಾ ನಮ್ಮ ನಾಯಕರು, ಅವರ ಜೊತೆಯೇ ಇರುತ್ತೇವೆ: ಬಂಡಾಯ ಕಾಂಗ್ರೆಸ್ ಶಾಸಕರು 

ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ ಮಧ್ಯ ಪ್ರದೇಶದಲ್ಲಿ ರಾಜೀನಾಮೆ ನೀಡಿದ್ದ 22 ಕಾಂಗ್ರೆಸ್ ಶಾಸಕರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸಿಂಧಿಯಾ ಅವರೇ ನಮ್ಮ ನಾಯಕರಾಗಿದ್ದು ಅವರ ಜೊತೆಯೇ ಯಾವಾಗಲೂ ಇರುತ್ತೇವೆ ಎಂದಿದ್ದಾರೆ.

ಬೆಂಗಳೂರು: ಜ್ಯೋತಿರಾದಿತ್ಯ ಸಿಂಧಿಯಾ ಜೊತೆಗೆ ಮಧ್ಯ ಪ್ರದೇಶ ಸರ್ಕಾರದಲ್ಲಿ ರಾಜೀನಾಮೆ ನೀಡಿದ್ದ 22 ಕಾಂಗ್ರೆಸ್ ಶಾಸಕರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸಿಂಧಿಯಾ ಅವರೇ ನಮ್ಮ ನಾಯಕರಾಗಿದ್ದು ಅವರ ಜೊತೆಯೇ ಯಾವಾಗಲೂ ಇರುತ್ತೇವೆ ಎಂದಿದ್ದಾರೆ.

ಇಂದು ಬೆಂಗಳೂರಿನಲ್ಲಿ ತಾವು ಉಳಿದುಕೊಂಡಿರುವ ರೆಸಾರ್ಟ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಂಡಾಯ ಕಾಂಗ್ರೆಸ್ ಶಾಸಕ ಇಮರ್ತಿ ದೇವಿ, ಜ್ಯೋತಿರಾದಿತ್ಯ ಸಿಂಧಿಯಾ ನಮ್ಮ ನಾಯಕರು. ಅವರಿಂದ ನಾವು ಸಾಕಷ್ಟು ಕಲಿತಿದ್ದೇವೆ. ಬಾವಿಗೆ ಬೀಳು ಎಂದು ಸಿಂಧಿಯಾ ಅವರು ಹೇಳಿದರೂ ಅವರ ಜೊತೆಯೇ ನಾವು ಇರುತ್ತೇವೆ ಎಂದರು.


ಮತ್ತೊಬ್ಬ ಬಂಡಾಯ ಶಾಸಕ ಗೋವಿಂದ್ ಸಿಂಗ್ ರಜಪೂತ್, ಮುಖ್ಯಮಂತ್ರಿ ಕಮಲ್ ನಾಥ್ ಅವರು 15 ನಿಮಿಷ ಕೂಡ ನಮ್ಮ ಮಾತು ಕೇಳಿಲ್ಲ. ಹಾಗಾದರೆ ನಮ್ಮ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ನಾವು ಯಾರಲ್ಲಿ ಹೇಳಿಕೊಳ್ಳಬೇಕು ಎಂದರು.


ಸಚಿವರಾದ ನಂತರ ನಮಗೆ ಶಾಂತಿಯಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ನಾವು ಸುರಕ್ಷಿತವಾಗಿಲ್ಲ. ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಗುರಿಯಾಗಿಟ್ಟುಕೊಂಡರೆ ನಮ್ಮನ್ನು ಕೂಡ ಗುರಿಯಾಗಿಡುತ್ತಾರೆ. ನಮಗೆ ಭದ್ರತೆ ಬೇಕು. ಜೈಪುರದಲ್ಲಿರುವ ಶಾಸಕರು ಕೂಡ ಅತೃಪ್ತರಾಗಿದ್ದಾರೆ ಎಂದರು.


ಮಧ್ಯ ಪ್ರದೇಶಕ್ಕೆ ಹೋದ ನಂತರ ಬಿಜೆಪಿ ಸೇರುವ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. 6 ಶಾಸಕರ ರಾಜೀನಾಮೆಯನ್ನು ಸ್ವೀಕರಿಸಿದ ನಂತರ ನಮ್ಮ ರಾಜೀನಾಮೆಯನ್ನು ಏಕೆ ಸ್ವೀಕರಿಸಿಲ್ಲ ಎಂದು ಕೋರ್ಟ್ ನಲ್ಲಿ ಕೂಡ ಪ್ರಶ್ನೆ ಮಾಡಿದ್ದೇವೆ ಎಂದು ಶಾಸಕ ತುಲ್ಸಿ ಸಿಲಾವತ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT