ದೇಶ

ನಾನು ಪ್ರತ್ಯೇಕ ವಾಸಿಸುವುದನ್ನು ನೋಡಿ ನಕ್ಕವರು ಇಂದು ಕೊರೋನಾ ಭಯಕ್ಕೆ ಬೇರೆ ಇರಲು ನೋಡುತ್ತಿದ್ದಾರೆ: ನಿತ್ಯಾನಂದ 

ವಿಲಕ್ಷಣ ಹೇಳಿಕೆಗಳ ಮೂಲಕ ಆಗಾಗ ಸುದ್ದಿಯಾಗುವ ಸ್ವಘೋಷಿತ ದೇವಮಾನವ ನಿತ್ಯಾನಂದ ಇದೀಗ ಕೊರೋನಾ ವೈರಸ್ ಬಗ್ಗೆ ಕೂಡ ಮಾತನಾಡಿದ್ದಾನೆ. 

ನವದೆಹಲಿ: ವಿಲಕ್ಷಣ ಹೇಳಿಕೆಗಳ ಮೂಲಕ ಆಗಾಗ ಸುದ್ದಿಯಾಗುವ ಸ್ವಘೋಷಿತ ದೇವಮಾನವ ನಿತ್ಯಾನಂದ ಇದೀಗ ಕೊರೋನಾ ವೈರಸ್ ಬಗ್ಗೆ ಕೂಡ ಮಾತನಾಡಿದ್ದಾನೆ. 


ಅಂದು ತಾನು ಸ್ವಯಂ ಪ್ರತ್ಯೇಕತೆಯಿಂದ ಬೇರೆಯ ದೇಶ ಸೃಷ್ಟಿಸಿ ವಾಸಿಸಲು ಆರಂಭಿಸಿದಾಗ ನನ್ನನ್ನು ಅಪಹಾಸ್ಯ ಮಾಡಿ ನಕ್ಕವರು ಇಂದು ಕೊರೋನಾ ವೈರಸ್ ನ ಭೀತಿಯಿಂದ ಪಾರಾಗಲು ಪ್ರತ್ಯೇಕವಾಗಿ ವಾಸಿಸಲು ಸ್ಥಳಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ನಿತ್ಯಾನಂದ ಹೇಳಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.


ಭಾರತದಲ್ಲಿರುವ ತನ್ನ ಆಶ್ರಮದಲ್ಲಿ ಶಿಷ್ಯೆಯರಿಗೆ ಕಿರುಕುಳ ಮತ್ತು ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ನಿತ್ಯಾನಂದ ಕಳೆದ ಡಿಸೆಂಬರ್ ನಲ್ಲಿ ಈಕ್ವೆಡಾರ್ ನಿಂದ ಒಂದು ದ್ವೀಪವನ್ನು ಖರೀದಿಸಿ ಅಲ್ಲಿ ಹೊಸ ದೇಶ ಕಟ್ಟಿಸಿ ಕೈಲಾಸ ಎಂದು ಹೆಸರನ್ನಿಟ್ಟು ಅದನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ ಆ ದೇಶಕ್ಕೆ ಪ್ರತ್ಯೇಕ ಧ್ವಜ, ರಾಷ್ಟ್ರಗೀತೆ ಮತ್ತು ಪಾಸ್ ಪೋರ್ಟ್ ಹೊಂದಿದ್ದಾನೆ ಎಂದು ಸುದ್ದಿಯಾಗಿತ್ತು. 


ಇದೀಗ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ಸಮಸ್ಯೆ ಬಗ್ಗೆ ನಿತ್ಯಾನಂದ ಮಾತನಾಡಿದ್ದು ಅದರಲ್ಲಿ, ನಾನು ಹೊಸ ದೇಶ ಕೈಲಾಸವನ್ನು ಕಟ್ಟಿದಾಗ ಹಲವು ಭಾರತೀಯರು ನನ್ನನ್ನು ಗೇಲಿ ಮಾಡಿದರು, ಇಂದು ಇಡೀ ಜಗತ್ತಿನಲ್ಲಿ ಜನರು ಕೊರೋನಾ ಭಯಕ್ಕೆ ಒಬ್ಬರಿಗೊಬ್ಬರು ಪ್ರತ್ಯೇಕವಾಗಿ ವಾಸಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಪರಮಶಿವ ದೇವರು ನಮ್ಮನ್ನು ಕಾಪಾಡಿದ್ದಾರೆ. ಇದು ದೇವರ ಶಕ್ತಿ ಎಂದು ಹೇಳಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT