ಮುಖೇಶ್ ಸಿಂಗ್ 
ದೇಶ

ಘಟನೆ ನಡೆದ ದಿನ ನಾನು ದೆಹಲಿಯಲ್ಲೇ ಇರ್ಲಿಲ್ಲ: ನೇಣುಗಂಬಕ್ಕೇರಲು 3 ದಿನವಿರುವಾಗ ನಿರ್ಭಯಾ ಅಪರಾಧಿಯ ಹೊಸ ವರಸೆ

ಆಘಾತಕಾರಿ ಬೆಳವಣಿಗೆಯಲ್ಲಿ 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ತಾನು ಘಟನೆ ನಡೆದ ದಿನ (ಡಿಸೆಂಬರ್ 16 2012) ರಂದು ದೆಹಲಿಯಲ್ಲಿ ಇರಲೇ ಇಲ್ಲ ಹಾಗಾಗಿ ತನಗೆ ವಿಧಿಸಲಾಗಿರುವ ಮರಣದಂಡನೆಯನ್ನು ರದ್ದುಗೊಳಿಸಬೇಕೆಂದು ಕೋರಿ ನ್ಯಾಯಾಲಯದ ಮೊರೆ ಹೊಕ್ಕಿದ್ದಾನೆ. ನಾಲ್ವರು ಅಪರಾಧಿಗಳಿಗೆ ನೇಣುಗಂಬವೇರಲು

ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಮುಖೇಶ್ ಸಿಂಗ್ ತಾನು ಘಟನೆ ನಡೆದ ದಿನ (ಡಿಸೆಂಬರ್ 16 2012) ರಂದು ದೆಹಲಿಯಲ್ಲಿ ಇರಲೇ ಇಲ್ಲ ಹಾಗಾಗಿ ತನಗೆ ವಿಧಿಸಲಾಗಿರುವ ಮರಣದಂಡನೆಯನ್ನು ರದ್ದುಗೊಳಿಸಬೇಕೆಂದು ಕೋರಿ ನ್ಯಾಯಾಲಯದ ಮೊರೆ ಹೊಕ್ಕಿದ್ದಾನೆ. ನಾಲ್ವರು ಅಪರಾಧಿಗಳಿಗೆ ನೇಣುಗಂಬವೇರಲು ಇನ್ನೇನು ಮೂರು ದಿನಗಳಷ್ಟೇ ಬಾಕಿ ರುವ ಈ ಸಮಯದಲ್ಲಿ ಅಪರಾಧಿ ತಾನು ಸ್ಥಳದಲ್ಲಿರಲಿಲ್ಲ ಎನ್ನುವ ಮೂಲಕ ಇಡೀ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಡುತ್ತಿರುವುದು ಅಚ್ಚರಿಯಾಗಿದೆ.

ತನ್ನ ವಾದವನ್ನು ಬೆಂಬಲಿಸಿ ಮುಖೇಶ್ ತನ್ನನ್ನು ರಾಜಸ್ಥಾನದಲ್ಲಿ ಬಂಧಿಸಲಾಯಿತು.ಹಾಗೂ ಘಟನೆ ನಡೆದ ದಿನದ ನಂತರ ಎಂದರೆ ರ 2012 ರ ಡಿಸೆಂಬರ್ 17 ರಂದು ದೆಹಲಿಗೆ ಕರೆತಂದರು ಎಂದು ಹೇಳಿದ್ದಾನೆ.

ಇಷ್ಟಲ್ಲದೆ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ನನಗೆ ಚಿತ್ರಹಿಂಸೆ ನೀಡಲಾಗಿದೆ. ಎಂದು ಅವರು ಹೇಳಿದ್ದಾರೆ. ಮುಖೇಶ್ ಪರ  ವಕೀಲ ಎಂ.ಎಲ್. ಶರ್ಮ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇದಲ್ಲದೆ, ಪ್ರಕರಣದ ಇತರ ಮೂವರು ಮರಣದಂಡನೆ ಶಿಕ್ಷೆಗೊಳಗಾಗಿರುವ ಅಪರಾಧಿಗಳಾದ ಅಕ್ಷಯ್ ಸಿಂಗ್, ಪವನ್ ಗುಪ್ತಾ ಮತ್ತು ವಿನಯ್ ಶರ್ಮಾ ಮಾರ್ಚ್ 16 ರಂದು ಅಂತರರಾಷ್ಟ್ರೀಯ ನ್ಯಾಯಾಲಯವನ್ನು (ಐಸಿಜೆ) ಸಂಪರ್ಕಿಸಿ, ಅವರ ಮರಣದಂಡನೆಯನ್ನು ತಡೆಹಿಡಿಯುವಂತೆ ಕೋರಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯಾಲಯವು ವಿಶ್ವಸಂಸ್ಥೆಯ ಪ್ರಮುಖ ನ್ಯಾಯಾಂಗ ಅಂಗವಾಗಿದೆ.

ವಿನಯ್, ಅಕ್ಷಯ್, ಮುಖೇಶ್, ಮತ್ತು ಪವನ್ ಎಂಬ ನಾಲ್ವರು ಅಪರಾಧಿಗಳನ್ನು ಮಾರ್ಚ್ 20 ರಂದು ಬೆಳಿಗ್ಗೆ 5.30 ಕ್ಕೆ ಗಲ್ಲಿಗೇರಿಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT