ಕೇಂದ್ರ ಸಚಿವ ಸುರೇಶ್ ಪ್ರಭು 
ದೇಶ

ಕೊರೋನಾ ಭೀತಿ: ಸೌದಿ ಭೇಟಿ ಬಳಿಕ ಸ್ವಯಂ ಗೃಹ ಬಂಧನ ವಿಧಿಸಿಕೊಂಡ ಬಿಜೆಪಿ ಸಂಸದ ಸುರೇಶ್ ಪ್ರಭು!

ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಹಿನ್ನಲೆಯಲ್ಲಿ ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಸ್ವಯಂ ಗೃಹ ಬಂಧನ ವಿಧಿಸಿಕೊಂಡಿದ್ದಾರೆ.

ನವದೆಹಲಿ: ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಸುರೇಶ್ ಪ್ರಭು ಅವರು ಸ್ವಯಂ ಗೃಹ ಬಂಧನ ವಿಧಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ಸೌದಿ ಅರೇಬಿಯಾದಿಂದ ವಾಪಸಾಗಿರುವ ಬಿಜೆಪಿ ಸಂಸದ ಸುರೇಶ್ ಪ್ರಭು ಅವರು ಕೊರೋನಾ ವೈರಸ್ ಸೋಂಕು ಭೀತಿ ಹಿನ್ನಲೆಯಲ್ಲಿ ಸ್ವತಃ ಗೃಹ ಬಂಧನ ವಿಧಿಸಿಕೊಂಡಿದ್ದಾರೆ. ಈ ಕುರಿತಂತೆ ಸುರೇಶ್ ಪ್ರಭು ಅವರೇ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ದುಬೈನಿಂದ ವಾಪಸ್ ಆದ ಬಳಿಕ ನಾನು ಎಲ್ಲ ರೀತಿಯ ವೈದ್ಯಕೀಯ ತಪಾಸಣೆಗೊಳಪಟ್ಟಿದ್ದೇನೆ. ಎಲ್ಲವೂ ನೆಗೆಟಿವ್ ತೋರಿಸುತ್ತಿದೆ. ಇದಾಗ್ಯೂ ಮುಂಜಾಗ್ರತಾ ಕ್ರಮವಾಗಿ ನಾನು ಕೆಲ ದಿನಗಳ ಕಾಲ ಸ್ವಯಂ ಗೃಹ ಬಂಧನದಲ್ಲಿರಬೇಕು ಎಂದು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ ಎಲ್ಲರೂ ನಿಯಮ ಪಾಲಿಸುವಂತೆ ಮನವಿ ಮಾಡಿದ್ದಾರೆ. ಮುಂದಿನ 14 ದಿನಗಳ ಕಾಲ ಮನೆಯಲ್ಲೇ ಇರುವುದಾಗಿ ತಿಳಿಸಿದ್ದಾರೆ. 

ಕೊರೊನಾ ವೈರಸ್ ಇಡೀ ವಿಶ್ವಾದ್ಯಂತ ಭಯ ಹುಟ್ಟಿಸುತ್ತಿರುವ ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದೇಶದಿಂದ ಬರುವವರೆಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಹಾಗೆಯೇ ಸೌದಿಯಿಂದ ಹಿಂದಿರುಗಿರುವ ಬಿಜೆಪಿ ಸಂಸದ ಸುರೇಶ್ ಪ್ರಭುಗೃಹ ದಿಗ್ಬಂಧನದಲ್ಲಿರಲು ನಿರ್ಧರಿಸಿದ್ದಾರೆ. ಸೌದಿಯಲ್ಲಿ ನಡೆದ ಜಿ20 ಶೆರ್ಪಾ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು. 

ಮಾಜಿ ವಿತ್ತ ಸಚಿವ ಸುರೇಶ್ ಪ್ರಭು ಅವರನ್ನು ಸೌದಿ ಅರೇಬಿಯಾದಲ್ಲಿ ನಡೆದ ಜಿ20 ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿಯವರು ಆಯ್ಕೆ ಮಾಡಿದ್ದರು. ಇದಕ್ಕೂ ಮುನ್ನ ಕೇಂದ್ರ ಸಚಿವ ವಿ ಮುರಳೀಧರನ್ ಕೇರಳದಲ್ಲಿ ಕೊರೋನಾ ರೋಗಿಗಳನ್ನು ಇರಿಸಲಾಗಿದ್ದ ಆಸ್ಪತ್ರೆ ಭೇಟಿ ನೀಡಿದ ಬಳಿಕ ಅವರೂ ಕೂಡ ಗೃಹ ದಿಗ್ಬಂಧನದಲ್ಲಿದ್ದರು. ಬಳಿಕ ವರದಿಯಲ್ಲಿ ಕೊರೊನಾ ವೈರಸ್ ನೆಗೆಟಿವ್ ಎಂದು ಬಂದಿತ್ತು. ಚೀನಾದಲ್ಲಿ ಕೊರೋನಾದಿಂದ 7 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು 1 ಲಕ್ಷಕ್ಕೂ ಹೆಚ್ಚು ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT