ಕೊರೋನಾ: ಸಹ ಪ್ರಯಾಣಿಕನಿಗೆ ಸೋಂಕು, ಸ್ವಯಂ ನಿರ್ಬಂಧದಲ್ಲಿ ದುಬೈ-ಮಂಗಳೂರು ವಿಮಾನದ 90 ಪ್ರಯಾಣಿಕರು! 
ದೇಶ

ಕೊರೋನಾ: ಸಹ ಪ್ರಯಾಣಿಕನಿಗೆ ಸೋಂಕು, ಸ್ವಯಂ ನಿರ್ಬಂಧದಲ್ಲಿ ದುಬೈ-ಮಂಗಳೂರು ವಿಮಾನದ 90 ಪ್ರಯಾಣಿಕರು! 

ದೇಶಾದ್ಯಂತ ಕೊರೋನಾ ವೈರಾಣು ಹರಡುವಿಕೆ ಹೆಚ್ಚಾಗುತ್ತಿದ್ದು, ದುಬೈ-ಮಂಗಳೂರು ವಿಮಾನದಲ್ಲಿ ಪ್ರಯಾಣಿಸಿದ್ದ ಓರ್ವ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ. 

ಮಂಗಳೂರು: ದೇಶಾದ್ಯಂತ ಕೊರೋನಾ ವೈರಾಣು ಹರಡುವಿಕೆ ಹೆಚ್ಚಾಗುತ್ತಿದ್ದು, ದುಬೈ-ಮಂಗಳೂರು ವಿಮಾನದಲ್ಲಿ ಪ್ರಯಾಣಿಸಿದ್ದ ಓರ್ವ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ. 

ಮಾ.14 ರಂದು ದುಬೈ ನಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದ್ದು, ಆತನೊಂದಿಗೆ ಪ್ರಯಾಣಿಸಿದ್ದ 90 ಪ್ರಯಾಣಿಕರು ಸ್ವಯಂ ನಿರ್ಬಂಧದಲ್ಲಿದ್ದು ಮನೆಯಲ್ಲಿ ಉಳಿದಿದ್ದಾರೆ. 

ಸೋಂಕು ಪತ್ತೆಯಾಗಿರುವ ವ್ಯಕ್ತಿ ಕೇರಳದವರಾಗಿದ್ದು, ಕಾಸರಗೋಡಿಗೆ ತೆರಳಿದ್ದರು. ತಕ್ಷಣವೇ ಎಚ್ಚೆತ್ತುಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು ಕಾಸರಗೋಡಿನ ಅಧಿಕಾರಿಗಳನ್ನು ಸಂಪರ್ಕಿಸಿ, ಸೋಂಕು ತಗುಲಿದ್ದ ವ್ಯಕ್ತಿ ಕಾಸರಗೋಡಿಗೆ ತಲುಪುವುದಕ್ಕೂ ಮುನ್ನ ಸಂಚರಿಸಿದ್ದ ಸ್ಥಳ ಸಂಪರ್ಕಿಸಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಪಡೆದಿದ್ದರು. 

ಸೋಂಕು ತಗುಲಿದ್ದ ವ್ಯಕ್ತಿ ಮಂಗಳೂರಿನಿಂದ ಕಾಸರಗೋಡಿಗೆ ನೇರವಾಗಿ ಬಂದಿದ್ದ ಎಂಬ ಮಾಹಿತಿಯನ್ನು ಕೇರಳ ನೀಡಿತ್ತು. ಇತ್ತ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೋಂಕು ತಗುಲಿದ್ದ ವ್ಯಕ್ತಿಯೊಂದಿಗೆ ವಿಮಾನದಲ್ಲಿ ಸಂಚರಿಸಿದ್ದವರ ಬಗ್ಗೆ ಮಾಹಿತಿ ಪಡೆದು ಅವರಿಗೆ ಮನೆಯಲ್ಲಿ ಇರುವಂತೆ ನಿರ್ಬಂಧ ವಿಧಿಸಲಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT