ಶಹೀನ್ ಬಾಗ್ ಪ್ರತಿಭಟನೆ 
ದೇಶ

ಕೊರೋನಾ ವೈರಸ್ ಎಫೆಕ್ಟ್: ಸದ್ದೇ ಇಲ್ಲದೇ ಖಾಲಿಯಾಗುತ್ತಿದೆ 'ಶಹೀನ್ ಬಾಗ್'

ಪೌರತ್ವ ತಿದ್ದಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕ ನೋಂದಣಿ (ಎನ್ ಪಿಆರ್) ವಿರುದ್ಧ ದೆಹಲಿಯ ಶಾಹೀನ್ ಬಾಗ್ ನಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿದ್ದ ಪ್ರತಿಭಟನೆಗೆ ಕೊರೋನಾ ವೈರಸ್ ಅಡ್ಡಿಯಾಗಿದ್ದು, ಪ್ರತಿಭಟನಾ ಸ್ಥಳದಿಂದ ಸದ್ದೇ ಇಲ್ಲದೇ ಪ್ರತಿಭಟನಾಕಾರರು ಜಾಗ ಖಾಲಿ ಮಾಡುತ್ತಿದ್ದಾರೆ.

ನವದೆಹಲಿ: ಪೌರತ್ವ ತಿದ್ದಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕ ನೋಂದಣಿ (ಎನ್ ಪಿಆರ್) ವಿರುದ್ಧ ದೆಹಲಿಯ ಶಾಹೀನ್ ಬಾಗ್ ನಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿದ್ದ ಪ್ರತಿಭಟನೆಗೆ ಕೊರೋನಾ ವೈರಸ್ ಅಡ್ಡಿಯಾಗಿದ್ದು, ಪ್ರತಿಭಟನಾ ಸ್ಥಳದಿಂದ ಸದ್ದೇ ಇಲ್ಲದೇ ಪ್ರತಿಭಟನಾಕಾರರು ಜಾಗ ಖಾಲಿ ಮಾಡುತ್ತಿದ್ದಾರೆ.

ಹೌದು.. ದೆಹಲಿಯ ಶಹೀನ್ ಬಾಗ್ ನಲ್ಲಿ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಸಾವಿರಾರು ಮಹಿಳಾ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು. ಆದರೆ ಇದೀಗ ದೇಶಾದ್ಯಂತ ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಿದ್ದಂತೆಯೇ ಪ್ರತಿಭಟನಾಕಾರರು ಸದ್ದೇ ಇಲ್ಲದೇ ತಮ್ಮ ಪ್ರತಿಭಟನೆಯನ್ನು ಕೈಬಿಟ್ಟು ಮನೆ ಸೇರಿ ಕೊಳ್ಳುತ್ತಿದ್ದಾರೆ. 

ನಿನ್ನೆಯಷ್ಟೇ ಪ್ರತಿಭಟನಾ ನಿರತರಿರುವ ಶಹೀನ್ ಬಾಗ್ ಗೆ ಆಗಮಿಸಿದ್ದ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ವೈರಸ್ ಕುರಿತಂತೆ ಚರ್ಚೆ ನಡೆಸಿದ್ದರು. ಅಲ್ಲದೆ ಪ್ರತಿಭಟನಾಕಾರರಿಗೆ ಕೊರೋನಾ ವೈರಸ್ ನ ಪರಿಣಾಮಗಳ ಕುರಿತು ತಿಳಿಹೇಳಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಪ್ರತಿಭಟನೆ ಮುಂದುವರೆಸಿದ್ದರು. ಆದರೆ ಇದೀಗ ಏಕಾಏಕಿ ಪ್ರತಿಭಟನಾಕಾರರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 

ಇತ್ತೀಚೆಗಷ್ಟೇ ದೆಹಲಿ ಸರ್ಕಾರ ಮಾರ್ಚ್ 31ರವರೆಗೂ 50ಕ್ಕಿಂತ ಹೆಚ್ಚುಜನ ಸೇರುವಂತಿಲ್ಲ ಎಂದು ನಿರ್ಬಂಧ ಹೇರಿತ್ತು. ಇದೂ ಕೂಡ ಪ್ರತಿಭಟನಾಕಾರರ ಸಂಖ್ಯೆ ಕ್ಷೀಣಿಸಲು ಕಾರಣ ಎಂದು ಹೇಳಲಾಗಿದೆ.

Delhi: Crowds thinning out at Shaheen Bagh protest site. Protest has been continuing here, against Citizenship Amendment Act and NRC-NPR, for the last 3 months. pic.twitter.com/XmM4Rh9cmW

— ANI (@ANI) March 18, 2020

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT