ಒಮರ್ ಅಬ್ದುಲ್ಲಾ 
ದೇಶ

'ಒಮರ್ ಅಬ್ದುಲ್ಲಾ ಅವರನ್ನು ಬಿಡುಗಡೆ ಮಾಡುವುದಾದರೆ ಮುಂದಿನ ವಾರದೊಳಗೆ ತಿಳಿಸಬೇಕು': ಕೇಂದ್ರಕ್ಕೆ ಸುಪ್ರೀಂ ತಾಕೀತು 

ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ತೆಗೆದುಹಾಕಿದ ನಂತರ ಗೃಹ ಬಂಧನದಲ್ಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಬಿಡುಗಡೆ ಮಾಡಲಾಗುತ್ತದೆಯೇ,ಇಲ್ಲವೇ ಎಂದು ಮುಂದಿನ ವಾರದೊಳಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಆಡಳಿತಕ್ಕೆ ತಿಳಿಸಿದೆ.

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ತೆಗೆದುಹಾಕಿದ ನಂತರ ಗೃಹ ಬಂಧನದಲ್ಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಬಿಡುಗಡೆ ಮಾಡಲಾಗುತ್ತದೆಯೇ, ಇಲ್ಲವೇ ಎಂದು ಮುಂದಿನ ವಾರದೊಳಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಜಮ್ಮು-ಕಾಶ್ಮೀರ ಆಡಳಿತಕ್ಕೆ ತಿಳಿಸಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ ಆರ್ ಶಾ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲರಿಗೆ ಒಮರ್ ಅಬ್ದುಲ್ಲಾ ಅವರನ್ನು ಸದ್ಯದಲ್ಲಿಯೇ ಬಿಡುಗಡೆ ಮಾಡದಿದ್ದರೆ ಅವರ ಗೃಹ ಬಂಧನ ಪ್ರಶ್ನಿಸಿ ಅವರ ಸೋದರಿ ಸಾರಾ ಅಬ್ದುಲ್ಲಾ ಪೈಲಟ್ ಸಲ್ಲಿಸಿದ ಮನವಿಯನ್ನು ಆದ್ಯತೆ ಮೇರೆಗೆ ಆಲಿಸಲಾಗುವುದು ಎಂದಿದೆ. ನೀವು ಒಮರ್ ಅಬ್ದುಲ್ಲಾ ಅವರನ್ನು ಬಿಡುಗಡೆ ಮಾಡುವುದಾದರೆ ತಕ್ಷಣ ಬಿಡುಗಡೆ ಮಾಡಿ, ಇಲ್ಲದಿದ್ದರೆ ಆದ್ಯತೆ ಮೇರೆಗೆ ಅವರ ಸೋದರಿಯ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ ಎಂದಿದೆ ನ್ಯಾಯಪೀಠ.

ಈ ಕೇಸಿನಲ್ಲಿ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತೊಂದು ಕೋರ್ಟ್ ನಲ್ಲಿ ವಿಚಾರಣೆಯಲ್ಲಿ ಬ್ಯುಸಿಯಾಗಿದ್ದಾರೆ ಎಂದಿದ್ದಕ್ಕೆ ನ್ಯಾಯಮೂರ್ತಿಗಳು ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ಒಮರ್ ಅಬ್ದುಲ್ಲಾ ಪರವಾಗಿ ವಾದ ಮಂಡಿಸುತ್ತಿರುವ ಹಿರಿಯ ಅಡ್ವೊಕೇಟ್ ಕಪಿಲ್ ಸಿಬಲ್, ಸದ್ಯದಲ್ಲಿಯೇ ವಿಚಾರಣೆಗೆ ಕೋರ್ಟ್ ದಿನಾಂಕ ನಿಗದಿಪಡಿಸಬೇಕು ಎಂದರು.

ಸದ್ಯ ಕೊರೋನಾ ವೈರಸ್ ಹಾವಳಿಯಿಂದಾಗಿ ಸುಪ್ರೀಂ ಕೋರ್ಟ್ ನಲ್ಲಿ ಆರು ಪೀಠಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ವಿಚಾರಣೆ ಯಾವಾಗ ಎಂದು ಹೇಳಲು ಸಾಧ್ಯವಿಲ್ಲ. ಬಹುಶಃ ಮುಂದಿನ ವಾರ ವಿಚಾರಣೆಯನ್ನು ಕೈಗೆತ್ತಿಕೊಳ್ಳಬಹುದು ಎಂದು ನ್ಯಾಯಪೀಠ ಹೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT