ದೇಶ

ಎಜಿಆರ್ ಶುಲ್ಕದ ಸ್ವಯಂ ಮೌಲ್ಯಮಾಪನ ಏಕೆ?: ಕೇಂದ್ರ ಸರ್ಕಾರ, ಟೆಲಿಕಾಂ ಕಂಪೆನಿಗಳಿಗೆ 'ಸುಪ್ರೀಂ' ತರಾಟೆ

ಕಳೆದ ವರ್ಷ ಅಕ್ಟೋಬರ್ 24ರಂದು ತನ್ನ ತೀರ್ಪಿನಲ್ಲಿ ನಿಗದಿಪಡಿಸಿದ್ದ ಎಜಿಆರ್ ಶುಲ್ಕ ಬಾಕಿ ಪಾವತಿ ಬಗ್ಗೆ ಸ್ವಯಂ ಮೌಲ್ಯಮಾಪನ ಅಥವಾ ಮರು ಮೌಲ್ಯಮಾಪನ ಮಾಡಿರುವ ಕೇಂದ್ರ ಸರ್ಕಾರ ಮತ್ತು ಟೆಲಿಕಾಂ ಕಂಪೆನಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆ ತೆಗೆದುಕೊಂಡಿದೆ.

ನವದೆಹಲಿ: ಕಳೆದ ವರ್ಷ ಅಕ್ಟೋಬರ್ 24ರಂದು ತನ್ನ ತೀರ್ಪಿನಲ್ಲಿ ನಿಗದಿಪಡಿಸಿದ್ದ ಎಜಿಆರ್ ಶುಲ್ಕ ಬಾಕಿ ಪಾವತಿ ಬಗ್ಗೆ ಸ್ವಯಂ ಮೌಲ್ಯಮಾಪನ ಅಥವಾ ಮರು ಮೌಲ್ಯಮಾಪನ ಮಾಡಿರುವ ಕೇಂದ್ರ ಸರ್ಕಾರ ಮತ್ತು ಟೆಲಿಕಾಂ ಕಂಪೆನಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆ ತೆಗೆದುಕೊಂಡಿದೆ.


ಎಜಿಆರ್ ಶುಲ್ಕದ ಬಗ್ಗೆ ಪತ್ರಿಕೆಯಲ್ಲಿ ಆಗಾಗ ಲೇಖನಗಳು, ಸುದ್ದಿಗಳು ಪ್ರಕಟವಾಗುವ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಟೆಲಿಕಾಂ ಕಂಪೆನಿಗಳ ಎಲ್ಲಾ ವ್ಯವಸ್ಥಾಪಕ ನಿರ್ದೇಶಕರು ಇದಕ್ಕೆ ವೈಯಕ್ತಿಕ ಜವಾಬ್ದಾರರಾಗಿದ್ದು ಇನ್ನು ಮುಂದೆ ಇಂತಹ ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾದರೆ ನ್ಯಾಯಾಂಗ ನಿಂದನೆ ಕೇಸು ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.


ಟೆಲಿಕಾಂ ಕಂಪೆನಿಗಳಿಗೆ ಎಜಿಆರ್ ಶುಲ್ಕವನ್ನು ಪಾವತಿಸಲು 20 ವರ್ಷ ಕಾಲಾವಕಾಶ ನೀಡಿ ಎಂದು ಕೇಂದ್ರ ಸರ್ಕಾರ ಸಲ್ಲಿಸಿದ ಮನವಿಯನ್ನು ಸ್ವೀಕರಿಸಲು ನಿರಾಕರಿಸಿದ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಎಸ್ ಎ ನಜೀರ್, ಎಂ ಆರ್ ಶಾ ಅವರನ್ನೊಳಗೊಂಡ ನ್ಯಾಯಪೀಠ, ಎರಡು ವಾರಗಳ ನಂತರ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT