ಕೊರೊನ ವೈರಸ್ 
ದೇಶ

ಕೊರೊನ ವೈರಸ್ ಹರಡುವಿಕೆ ತಡೆಗೆ ಎಲ್ಲ ದಂತ ಚಿಕಿತ್ಸಾಲಯಗಳನ್ನು ಮುಚ್ಚುವಂತೆ ಸರ್ಕಾರಕ್ಕೆ ಒತ್ತಾಯ

ಕೊರೊನ ವೈರಸ್ ಹರಡುವಿಕೆ ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ದಂತ ಚಿಕಿತ್ಸಾಲಯಗಳನ್ನು ಮುಚ್ಚುವಂತೆ ಕಾಂಗ್ರೆಸ್ ಸಂವಹನ ಉಸ್ತುವಾರಿ ರಣದೀಪ್ ಸುರ್ಜೇವಾಲ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ನವದೆಹಲಿ: ಕೊರೊನ ವೈರಸ್ ಹರಡುವಿಕೆ ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ದಂತ ಚಿಕಿತ್ಸಾಲಯಗಳನ್ನು ಮುಚ್ಚುವಂತೆ ಕಾಂಗ್ರೆಸ್ ಸಂವಹನ ಉಸ್ತುವಾರಿ ರಣದೀಪ್ ಸುರ್ಜೇವಾಲ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ದೇಶದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ದಂತ ಚಿಕಿತ್ಸಾಲಯಗಳಿದ್ದು, ಇವುಗಳಿಂದ ಸೋಂಕು ಹರಡುವಿಕೆ ಹೆಚ್ಚು. ಈ ಹಿನ್ನೆಲೆಯಲ್ಲಿ ತುರ್ತು ಪ್ರಕರಣಗಳನ್ನು ಹೊರತು ಪಡಿಸಿ ಎಲ್ಲ ಚಿಕಿತ್ಸಾಲಯಗಳನ್ನು ಬಂದ್ ಮಾಡುವುದು ತುರ್ತು ಅಗತ್ಯವಾಗಿದೆ ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಇದುವರೆಗೆ ಸಮುದಾಯಗಳಿಂದ ಕೊರೊನವೈರಸ್ ಉಲ್ಬಣಗೊಂಡ ನಿದರ್ಶನಗಳಿಲ್ಲ. ಸಮುದಾಯಗಳ 100 ಮಾದರಿಗಳ ಪೈಕಿ 500 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ ಸೋಂಕು ಇರುವುದು ದೃಢಪಟ್ಟಿಲ್ಲ.

ಆರೋಗ್ಯ ಇಲಾಖೆ ಮಾಹಿತಿಯಂತೆ ದೇಶದಲ್ಲಿ ಕೊರೊನವೈರಸ್ ಸೋಂಕಿತರ ಸಂಖ್ಯೆ 147ಕ್ಕೇರಿದೆ. ಇವುಗಳಲ್ಲಿ 25 ವಿದೇಶಿ ಪ್ರಜೆಗಳು ಸೇರಿದ್ದಾರೆ. ಸೋಂಕಿನಿಂದ ದೆಹಲಿ, ಮಹಾರಾಷ್ರ ಮತ್ತು ಕರ್ನಾಟಕದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel