ಕೊರೊನ ವೈರಸ್ 
ದೇಶ

ಕೊರೊನ ವೈರಸ್ ಹರಡುವಿಕೆ ತಡೆಗೆ ಎಲ್ಲ ದಂತ ಚಿಕಿತ್ಸಾಲಯಗಳನ್ನು ಮುಚ್ಚುವಂತೆ ಸರ್ಕಾರಕ್ಕೆ ಒತ್ತಾಯ

ಕೊರೊನ ವೈರಸ್ ಹರಡುವಿಕೆ ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ದಂತ ಚಿಕಿತ್ಸಾಲಯಗಳನ್ನು ಮುಚ್ಚುವಂತೆ ಕಾಂಗ್ರೆಸ್ ಸಂವಹನ ಉಸ್ತುವಾರಿ ರಣದೀಪ್ ಸುರ್ಜೇವಾಲ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ನವದೆಹಲಿ: ಕೊರೊನ ವೈರಸ್ ಹರಡುವಿಕೆ ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ದಂತ ಚಿಕಿತ್ಸಾಲಯಗಳನ್ನು ಮುಚ್ಚುವಂತೆ ಕಾಂಗ್ರೆಸ್ ಸಂವಹನ ಉಸ್ತುವಾರಿ ರಣದೀಪ್ ಸುರ್ಜೇವಾಲ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ದೇಶದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ದಂತ ಚಿಕಿತ್ಸಾಲಯಗಳಿದ್ದು, ಇವುಗಳಿಂದ ಸೋಂಕು ಹರಡುವಿಕೆ ಹೆಚ್ಚು. ಈ ಹಿನ್ನೆಲೆಯಲ್ಲಿ ತುರ್ತು ಪ್ರಕರಣಗಳನ್ನು ಹೊರತು ಪಡಿಸಿ ಎಲ್ಲ ಚಿಕಿತ್ಸಾಲಯಗಳನ್ನು ಬಂದ್ ಮಾಡುವುದು ತುರ್ತು ಅಗತ್ಯವಾಗಿದೆ ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಇದುವರೆಗೆ ಸಮುದಾಯಗಳಿಂದ ಕೊರೊನವೈರಸ್ ಉಲ್ಬಣಗೊಂಡ ನಿದರ್ಶನಗಳಿಲ್ಲ. ಸಮುದಾಯಗಳ 100 ಮಾದರಿಗಳ ಪೈಕಿ 500 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ ಸೋಂಕು ಇರುವುದು ದೃಢಪಟ್ಟಿಲ್ಲ.

ಆರೋಗ್ಯ ಇಲಾಖೆ ಮಾಹಿತಿಯಂತೆ ದೇಶದಲ್ಲಿ ಕೊರೊನವೈರಸ್ ಸೋಂಕಿತರ ಸಂಖ್ಯೆ 147ಕ್ಕೇರಿದೆ. ಇವುಗಳಲ್ಲಿ 25 ವಿದೇಶಿ ಪ್ರಜೆಗಳು ಸೇರಿದ್ದಾರೆ. ಸೋಂಕಿನಿಂದ ದೆಹಲಿ, ಮಹಾರಾಷ್ರ ಮತ್ತು ಕರ್ನಾಟಕದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT