ಸಂಗ್ರಹ ಚಿತ್ರ 
ದೇಶ

ಕೋವಿಡ್-19:  ಚಂಡೀಗಢ ವ್ಯಕ್ತಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆ

ಪಂಜಾಬ್ ರಾಜ್ಯದ ಚಂಡೀಗಢದಲ್ಲಿ ವ್ಯಕ್ತಿಯೊಬ್ಬರಲ್ಲಿ ವೈರಸ್ ದೃಢಪಟ್ಟಿದ್ದು, ಇದರಂತೆ ದೇಶದಾದ್ಯಂತ ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ. 

ನವದೆಹಲಿ: ಪಂಜಾಬ್ ರಾಜ್ಯದ ಚಂಡೀಗಢದಲ್ಲಿ ವ್ಯಕ್ತಿಯೊಬ್ಬರಲ್ಲಿ ವೈರಸ್ ದೃಢಪಟ್ಟಿದ್ದು, ಇದರಂತೆ ದೇಶದಾದ್ಯಂತ ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ. 

ಚಂಡೀಗಢ ಮೂಲಕ 23 ವರ್ಷದ ಮಹಿಲೆಯಲ್ಲಿ ವೈರಾಣು ದೃಢಪಟ್ಟಿದೆ ಎಂದು ಹೇಳಲಾಗುತ್ತಿದ್ದು, ಮಹಿಳೆ ಇತ್ತೀಚೆಗಷ್ಟೇ ಬ್ರಿಟನ್ ನಿಂದ ಭಾರತಕ್ಕೆ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. 

ಕಳೆದ ಶನಿವಾರವಷ್ಟೇ ನೂರರ ಗಡಿ ದಾಟಿದ್ದ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಗುರುವಾರ 170ಕ್ಕೆ ತಲುಪಿದೆ. 

ನಿನ್ನೆಯಷ್ಟೇ ದೇಶದ ವಿವಿಧ ರಾಜ್ಯಗಳಲ್ಲಿ ಹೊಸದಾಗಿ 23 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ವರೆಗೂ ಭಾರತದಲ್ಲಿ ವೈರಸ್'ಗೆ ಮೂವರು ಸಾವನ್ನಪ್ಪಿದ್ದಾರೆ. ಸುದೈವವಶಾತ್ 14 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 

ಈ ನಡುವೆ ಕೊರೋನಾ ಭೀತಿಯಿಂದಾಗಿ 5800 ಕೈದಿಗಳನ್ನು ಬಿಡುಗಡೆ ಮಾಡಲು ಪಂಜಾಬ್ ಬಂದೀಖಾನೆ ಸಚಿವಾಲಯ ಮುಂದಾಗಿದೆ ಎಂದು ತಿಳಿದುಬಂದಿದೆ. 

ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ 3000 ಹಾಗೂ ಸಣ್ಣಪುಟ್ಟ ಪ್ರಕರಣಗಳಲ್ಲಿ ಬಂಧಿತರಾಗಿರುವ 2800 ಕೈದಿಗಳ ಬಿಡುಗಡೆಗೆ ಸಚಿವಾಲಯ ಪ್ರಸ್ತಾಪ ಕಳುಹಿಸಿದೆ. 

2.5 ಕೋಟಿ ನಿರುದ್ಯೋಗಿಗಳು
ಕೊರೋನಾ ಪರಿಣಾಮ ವಿಶ್ವದಾದ್ಯಂತ 2.5 ಕೋಟಿ ಜನ ನಿರುದ್ಯೋಗಿಗಳಾಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಕಾರ್ಮಿಕರು ರೂ.251 ಲಕ್ಷ ಕೋಟಿ  ಆದಾಯ ಕಳೆದುಕೊಂಡು ನಷ್ಟ ಅನುಭವಿಸಲಿದ್ದಾರೆಂದು ವಿಶ್ವ ಸಂಸ್ಥೆಯ ಅಂಗಸಂಸ್ಥೆಯಾದ ವಿಶ್ವ ಕಾರ್ಮಿಕ ಸಂಘಟನೆ ಎಚ್ಚರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?