ಸಂಗ್ರಹ ಚಿತ್ರ 
ದೇಶ

ಕೋವಿಡ್-19:  ಚಂಡೀಗಢ ವ್ಯಕ್ತಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆ

ಪಂಜಾಬ್ ರಾಜ್ಯದ ಚಂಡೀಗಢದಲ್ಲಿ ವ್ಯಕ್ತಿಯೊಬ್ಬರಲ್ಲಿ ವೈರಸ್ ದೃಢಪಟ್ಟಿದ್ದು, ಇದರಂತೆ ದೇಶದಾದ್ಯಂತ ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ. 

ನವದೆಹಲಿ: ಪಂಜಾಬ್ ರಾಜ್ಯದ ಚಂಡೀಗಢದಲ್ಲಿ ವ್ಯಕ್ತಿಯೊಬ್ಬರಲ್ಲಿ ವೈರಸ್ ದೃಢಪಟ್ಟಿದ್ದು, ಇದರಂತೆ ದೇಶದಾದ್ಯಂತ ಸೋಂಕಿತರ ಸಂಖ್ಯೆ 170ಕ್ಕೆ ಏರಿಕೆಯಾಗಿದೆ. 

ಚಂಡೀಗಢ ಮೂಲಕ 23 ವರ್ಷದ ಮಹಿಲೆಯಲ್ಲಿ ವೈರಾಣು ದೃಢಪಟ್ಟಿದೆ ಎಂದು ಹೇಳಲಾಗುತ್ತಿದ್ದು, ಮಹಿಳೆ ಇತ್ತೀಚೆಗಷ್ಟೇ ಬ್ರಿಟನ್ ನಿಂದ ಭಾರತಕ್ಕೆ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. 

ಕಳೆದ ಶನಿವಾರವಷ್ಟೇ ನೂರರ ಗಡಿ ದಾಟಿದ್ದ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಗುರುವಾರ 170ಕ್ಕೆ ತಲುಪಿದೆ. 

ನಿನ್ನೆಯಷ್ಟೇ ದೇಶದ ವಿವಿಧ ರಾಜ್ಯಗಳಲ್ಲಿ ಹೊಸದಾಗಿ 23 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ವರೆಗೂ ಭಾರತದಲ್ಲಿ ವೈರಸ್'ಗೆ ಮೂವರು ಸಾವನ್ನಪ್ಪಿದ್ದಾರೆ. ಸುದೈವವಶಾತ್ 14 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 

ಈ ನಡುವೆ ಕೊರೋನಾ ಭೀತಿಯಿಂದಾಗಿ 5800 ಕೈದಿಗಳನ್ನು ಬಿಡುಗಡೆ ಮಾಡಲು ಪಂಜಾಬ್ ಬಂದೀಖಾನೆ ಸಚಿವಾಲಯ ಮುಂದಾಗಿದೆ ಎಂದು ತಿಳಿದುಬಂದಿದೆ. 

ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ 3000 ಹಾಗೂ ಸಣ್ಣಪುಟ್ಟ ಪ್ರಕರಣಗಳಲ್ಲಿ ಬಂಧಿತರಾಗಿರುವ 2800 ಕೈದಿಗಳ ಬಿಡುಗಡೆಗೆ ಸಚಿವಾಲಯ ಪ್ರಸ್ತಾಪ ಕಳುಹಿಸಿದೆ. 

2.5 ಕೋಟಿ ನಿರುದ್ಯೋಗಿಗಳು
ಕೊರೋನಾ ಪರಿಣಾಮ ವಿಶ್ವದಾದ್ಯಂತ 2.5 ಕೋಟಿ ಜನ ನಿರುದ್ಯೋಗಿಗಳಾಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಕಾರ್ಮಿಕರು ರೂ.251 ಲಕ್ಷ ಕೋಟಿ  ಆದಾಯ ಕಳೆದುಕೊಂಡು ನಷ್ಟ ಅನುಭವಿಸಲಿದ್ದಾರೆಂದು ವಿಶ್ವ ಸಂಸ್ಥೆಯ ಅಂಗಸಂಸ್ಥೆಯಾದ ವಿಶ್ವ ಕಾರ್ಮಿಕ ಸಂಘಟನೆ ಎಚ್ಚರಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT