ದೇಶ

ಸುಪ್ರೀಂನಲ್ಲೂ ಅತ್ಯಾಚಾರಿಗಳ ಅರ್ಜಿ ವಜಾ: ಗಲ್ಲು  ಶಿಕ್ಷೆಗೆ ಕ್ಷಣಗಣನೆ

Nagaraja AB

ನವದೆಹಲಿ: ಗಲ್ಲು ಶಿಕ್ಷೆ ಜಾರಿಗೆ ಕೆಲವೇ  ತಾಸುಗಳು ಬಾಕಿ ಇರುವಂತೆ ನಿರ್ಭಯಾ ಪ್ರಕರಣದ ಅಪರಾಧಿಗಳು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಮರುಪರಿಶೀಲನಾ ಅರ್ಜಿ ಕೂಡಾ ವಜಾ ಆಗಿದೆ

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ವಾದ ವಿವಾದದ ಬಳಿಕ ಭಾರತದ ರಾಷ್ಟ್ರಪತಿಗಳ ನಿರ್ಧಾರವನ್ನು ಪರಿಶೀಲಿಸಲು ನಮಗೆ ಯಾವುದೇ ಆಧಾರಗಳಿಲ್ಲ "ಎಂದು ಹೇಳಿದ ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ನ್ಯಾಯಪೀಠ, ಅತ್ಯಾಚಾರಿಗಳು ಸಲ್ಲಿಸಿದ ಅರ್ಜಿಗಳನ್ನು ವಜಾಗೊಳಿಸಿದೆ. 

ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್ ಹಾಗೂ ಪಟಿಯಾಲ ಕೋರ್ಟ್  ಕೂಡಾ ಅತ್ಯಾಚಾರಿಗಳ ಅರ್ಜಿಗಳನ್ನು ವಜಾಗೊಳಿಸಿತ್ತು.

ಅತ್ಯಾಚಾರಿಗಳಿಗೆ ಈಗ ತಕ್ಕ ಶಿಕ್ಷೆಯಾಗಿದೆ. ನನ್ನ ಮಗಳ ಸಾವಿಗೆ ನ್ಯಾಯ ದೊರಕಿದೆ ಎಂದು ನಿರ್ಭಯಾ ತಾಯಿ ಆಶಾದೇವಿ ಸಂತಸ ವ್ಯಕ್ತಪಡಿಸಿದ್ದಾರೆ

SCROLL FOR NEXT