ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ ಕಂಟಕ: ಕರ್ಚೀಫ್ ಇಲ್ಲದೆ ಸೀನಿದವನಿಗೆ ಸಾರ್ವಜನಿಕರಿಂದ ಧರ್ಮದೇಟು!

ವಿಶ್ವಾದ್ಯಂತ ಕೊರೋನಾ ವೈರಸ್​ ಭೀತಿ ಹೆಚ್ಚುತ್ತಲೇ ಇದೆ. ಯಾರಾದರೂ ನೆಗಡಿ ಬಂದು ಸೀನಿದರೆ ಅವರನ್ನು ಅಪರಾಧಿ ಎನ್ನುವ ರೀತಿ ನೋಡಲಾಗುತ್ತಿದೆ. 

ಕೊಲ್ಲಾಪುರ: ವಿಶ್ವಾದ್ಯಂತ ಕೊರೋನಾ ವೈರಸ್​ ಭೀತಿ ಹೆಚ್ಚುತ್ತಲೇ ಇದೆ. ಯಾರಾದರೂ ನೆಗಡಿ ಬಂದು ಸೀನಿದರೆ ಅವರನ್ನು ಅಪರಾಧಿ ಎನ್ನುವ ರೀತಿ ನೋಡಲಾಗುತ್ತಿದೆ. 

ಮಹಾರಾಷ್ಟ್ರದಲ್ಲಿ ರಸ್ತೆಯ ಮೇಲೆ  ಕರ್ಚೀಫ್ ಇಲ್ಲದೇ ಸೀನಿದ ವ್ಯಕ್ತಿಯನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಈ ಘಟನೆ ನಡೆದಿದೆ. ಬೈಕ್​ ಚಲಾಯಿಸಿಕೊಂಡು ಹೋಗುತ್ತಿದ್ದ ಯುವಕನೋರ್ವ ಸೀನಿದ್ದಾನೆ. ಈ ವೇಳೆ ಆತ ಮುಖಕ್ಕೆ ಅಡ್ಡಲಾಗಿ ಏನನ್ನೂ ಇಟ್ಟುಕೊಂಡಿರಲಿಲ್ಲ. ಇದನ್ನು ನೋಡಿದ ಕೆಲವರು ಬೈಕ್​ ನಿಲ್ಲಿಸುವಂತೆ ಸೂಚಿಸಿದ್ದಾರೆ.

‘ಸೀನುವಾಗ ಮುಖಕ್ಕೆ ಅಡ್ಡಲಾಗಿ ಏನಾದರೂ ಇಟ್ಟುಕೊಳ್ಳಬೇಕು ಎನ್ನುವ ಸಾಮಾನ್ಯ ಜ್ಞಾನವೂ ಇಲ್ಲವೇ? ನಿಮ್ಮಂಥವರಿಂದಲೇ ಕೊರೋನಾ ವೈರಸ್ ಹೆಚ್ಚು ಹರಡುತ್ತಿದೆ,’ ಎಂದು ಬೈಕ್​ ತಡೆದವರು ಸೀನಿದವನಿಗೆ ಬುದ್ಧಿವಾದ ಹೇಳಿದ್ದಾರೆ. ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ನಂತರ ಸೀನಿದ ವ್ಯಕ್ತಿಯನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಕೆಲ ಕಾಲ ಟ್ರಾಫಿಕ್​ ಜ್ಯಾಮ್​ ಕೂಡ ಉಂಟಾಗಿತ್ತು. ನಂತರ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT