ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ ಕಂಟಕ: ಕರ್ಚೀಫ್ ಇಲ್ಲದೆ ಸೀನಿದವನಿಗೆ ಸಾರ್ವಜನಿಕರಿಂದ ಧರ್ಮದೇಟು!

ವಿಶ್ವಾದ್ಯಂತ ಕೊರೋನಾ ವೈರಸ್​ ಭೀತಿ ಹೆಚ್ಚುತ್ತಲೇ ಇದೆ. ಯಾರಾದರೂ ನೆಗಡಿ ಬಂದು ಸೀನಿದರೆ ಅವರನ್ನು ಅಪರಾಧಿ ಎನ್ನುವ ರೀತಿ ನೋಡಲಾಗುತ್ತಿದೆ. 

ಕೊಲ್ಲಾಪುರ: ವಿಶ್ವಾದ್ಯಂತ ಕೊರೋನಾ ವೈರಸ್​ ಭೀತಿ ಹೆಚ್ಚುತ್ತಲೇ ಇದೆ. ಯಾರಾದರೂ ನೆಗಡಿ ಬಂದು ಸೀನಿದರೆ ಅವರನ್ನು ಅಪರಾಧಿ ಎನ್ನುವ ರೀತಿ ನೋಡಲಾಗುತ್ತಿದೆ. 

ಮಹಾರಾಷ್ಟ್ರದಲ್ಲಿ ರಸ್ತೆಯ ಮೇಲೆ  ಕರ್ಚೀಫ್ ಇಲ್ಲದೇ ಸೀನಿದ ವ್ಯಕ್ತಿಯನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಈ ಘಟನೆ ನಡೆದಿದೆ. ಬೈಕ್​ ಚಲಾಯಿಸಿಕೊಂಡು ಹೋಗುತ್ತಿದ್ದ ಯುವಕನೋರ್ವ ಸೀನಿದ್ದಾನೆ. ಈ ವೇಳೆ ಆತ ಮುಖಕ್ಕೆ ಅಡ್ಡಲಾಗಿ ಏನನ್ನೂ ಇಟ್ಟುಕೊಂಡಿರಲಿಲ್ಲ. ಇದನ್ನು ನೋಡಿದ ಕೆಲವರು ಬೈಕ್​ ನಿಲ್ಲಿಸುವಂತೆ ಸೂಚಿಸಿದ್ದಾರೆ.

‘ಸೀನುವಾಗ ಮುಖಕ್ಕೆ ಅಡ್ಡಲಾಗಿ ಏನಾದರೂ ಇಟ್ಟುಕೊಳ್ಳಬೇಕು ಎನ್ನುವ ಸಾಮಾನ್ಯ ಜ್ಞಾನವೂ ಇಲ್ಲವೇ? ನಿಮ್ಮಂಥವರಿಂದಲೇ ಕೊರೋನಾ ವೈರಸ್ ಹೆಚ್ಚು ಹರಡುತ್ತಿದೆ,’ ಎಂದು ಬೈಕ್​ ತಡೆದವರು ಸೀನಿದವನಿಗೆ ಬುದ್ಧಿವಾದ ಹೇಳಿದ್ದಾರೆ. ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ನಂತರ ಸೀನಿದ ವ್ಯಕ್ತಿಯನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಕೆಲ ಕಾಲ ಟ್ರಾಫಿಕ್​ ಜ್ಯಾಮ್​ ಕೂಡ ಉಂಟಾಗಿತ್ತು. ನಂತರ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT