ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ 
ದೇಶ

ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ವನ್ಯಜೀವಿ ಮಂಡಳಿ ಹಸಿರು ನಿಶಾನೆ..!!

ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿದ್ದು, ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ತಿಳಿದು ಬಂದಿದೆ.

ಬೆಂಗಳೂರು: ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿದ್ದು, ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ತಿಳಿದು ಬಂದಿದೆ.

ವಿಧಾನಸೌಧಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ 14ನೇ ವನ್ಯಜೀವಿ ಮಂಡಳಿ ಸಭೆಯಲ್ಲಿ ಪರಿಸರವಾದಿಗಳು ಮತ್ತು ಮಂಡಳಿಯ ಕೆಲ ಸದಸ್ಯರಿಂದ ತೀವ್ರ ವಿರೋಧಕ್ಕೊಳಗಾಗಿದ್ದ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಪರಿಸರವಾದಿಗಳ ವಿರೋಧದ ಮಧ್ಯೆಯೂ ಯೋಜನೆ ಪರ ತೀರ್ಮಾನ ಕೈಗೊಳ್ಳಲಾಗಿದ್ದು, ಯೋಜನೆ ಬೆಂಬಲಿಸಿ ಕೇಂದ್ರಕ್ಕೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಇಂದು ನಡೆದ ಸಭೆಯಲ್ಲೂ ಮಂಡಳಿ ಸದಸ್ಯರು ಯೋಜನೆಗೆ ತಮ್ಮ ಆಕ್ಷೇಪ ವ್ಯಕ್ತಡಿಸಿದರು. ಸಭೆಯಲ್ಲಿ ಸಚಿವರಾದ ಜಗದೀಶ್ ಶೆಟ್ಟರ್ , ಶಿವರಾಮ್ ಹೆಬ್ಬಾರ್, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕರಾದ ಸೌಮ್ಯ ರೆಡ್ಡಿ ಮತ್ತು ವನ್ಯಜೀವಿ ಮಂಡಳಿಯ ಸದಸ್ಯರು ಭಾಗಿಯಾಗಿದ್ದರು.

ಈ ಯೋಜನೆ ಅನುಷ್ಠಾನಕ್ಕೆ ಉತ್ತರ ಕರ್ನಾಟಕ ಭಾಗದ ಶಾಸಕರು, ಜನಪ್ರತಿನಿಧಿಗಳಿಂದ ಸಾಕಷ್ಟು ರಾಜಕೀಯ ಒತ್ತಡ ಇತ್ತು ಎನ್ನಲಾಗಿದೆ. 

ಏನಿದು ಯೋಜನೆ?:
164.44 ಕಿ.ಮೀ ಉದ್ದದ ಹುಬ್ಬಳ್ಳಿ - ಅಂಕೋಲಾ ರೈಲು ಯೋಜನೆಯನ್ನು 1997ರಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಪರಿಸರವಾದಿಗಳ ತೀವ್ರ ವಿರೋಧದ ಹಿನ್ನೆಲೆ ಯೋಜನೆ ಅನುಷ್ಠಾನ ವಿಳಂಬವಾಗಿತ್ತು.

ಇದೀಗ ಯೋಜನೆಗೆ ವನ್ಯ ಜೀವಿ ಮಂಡಳಿ ಸಭೆಯಲ್ಲಿ ಹಸಿರು ನಿಶಾನೆ ಸಿಕ್ಕಿದೆ. ಈ ಯೋಜನೆ ಎರಡು ಪ್ರಮುಖ ಸಂರಕ್ಷಿತ ಅರಣ್ಯ ವಲಯಗಳಾದ ಕಾಳಿ ಹುಲಿ ರಕ್ಷಿತಾರಣ್ಯ ಮತ್ತು ಬೆಡ್ತಿ ಮೀಸಲು ಅರಣ್ಯ ಪ್ರದೇಶಗಳನ್ನು ಹಾದು ಹೋಗುತ್ತದೆ.
ಹುಬ್ಬಳ್ಳಿ-ಯಲ್ಲಾಪುರ ವರೆಗಿನ 75 ಕಿ.ಮೀ ಮಾರ್ಗ ಸಮತಟ್ಟಾದ ಪ್ರದೇಶವಾಗಿದ್ದು, ಯಲ್ಲಾಪುರದಿಂದ ಸುನ್ ಕ್ಸಲ್ ವರೆಗಿನ 56 ಕಿ.ಮೀ ಉದ್ದದ ಪ್ರದೇಶ ಗುಡ್ಡಪ್ರದೇಶದಿಂದ ಕೂಡಿದೆ. ರೈಲು ಮಾರ್ಗ ಶೇ 70ಕ್ಕೂ ಹೆಚ್ಚು ಪ್ರದೇಶ ದಟ್ಟ ಅರಣ್ಯ ಪ್ರದೇಶದಲ್ಲೇ ಹಾದು ಹೋಗುತ್ತದೆ.

ಈ ಯೋಜನೆಗೆ ಸುಮಾರು 995.64 ಹೆಕ್ಟೇರ್ ಜಮೀನಿನ ಅಗತ್ಯ ಇದೆ. ಈ ಪೈಕಿ 595.64 ಹೆಕ್ಟೇರ್ ಭೂಮಿ ಅರಣ್ಯ ಭೂಮಿಯಾಗಿದ್ದರೆ, 184.6 ಹೆಕ್ಟೇರ್ ನೀರಾವರಿ ಭೂಮಿ ಮತ್ತು 190 ಹೆಕ್ಟೇರ್ ಒಣ ಭೂಮಿ ಇದೆ. ಸುಮಾರು ಎರಡು ಲಕ್ಷ ಮರಗಳು ಈ ಯೋಜನೆಗೆ ಧರೆಗುರುಳಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

ಗೃಹ ಬಳಕೆ ಎಲ್ ಪಿಜಿಗೆ ಆದ್ಯತೆ, ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್

ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎನ್ನುತ್ತಾ ಹೊಸ ಟ್ವಿಸ್ಟ್ ನೀಡಿದ ಸಿಎಂ ಸಿದ್ದರಾಮಯ್ಯ!

'ನಾವಿರೋದ್ರಿಂದ ಹಿಂದೂಗಳು ಸುರಕ್ಷಿತ.. ಇಲ್ಲ ಅಂದ್ರೆ ಆ ಸಮುದಾಯದವ್ರು ಮುಗಿಸಿಬಿಡುತ್ತಿದ್ದರು': Mamata Banerjee ವಿವಾದಾತ್ಮಕ ಹೇಳಿಕೆ, ಬಿಜೆಪಿ ಕಿಡಿ

'T20 ವಿಶ್ವಕಪ್ ಟ್ರೋಫಿ 140 ಕೋಟಿ ಭಾರತೀಯರಿಗೆ ಸೇರಿದ್ದು..': ಹನುಮನ ದೇಗುಲಕ್ಕೆ ಹೋದ ಟೀಂ ಇಂಡಿಯಾ ಟೀಕಿಸಿದ Kirti Azad

SCROLL FOR NEXT