ನಿರ್ಭಯಾ ಅತ್ಯಾಚಾರಿಗಳು 
ದೇಶ

ನಿರ್ಭಯಾ ಗ್ಯಾಂಗ್ ರೇಪ್: ನಾಲ್ವರು ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಜಾರಿ 

ಇಡೀ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದ್ದ ದೆಹಲಿ ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳ ಕುತ್ತಿಗೆಗೆ ಸೂರ್ಯೊದಯಕ್ಕೂ ಮುನ್ನವೇ ಕುಣಿಕೆ ಬಿದಿದ್ದೆ. ಆ ಮೂಲಕ ಏಳು ವರ್ಷಗಳ ಬಳಿಕ ನಿರ್ಭಯಾ ಸಾವಿಗೆ ನ್ಯಾಯ ಸಿಕ್ಕಿದೆ. 

ನವದೆಹಲಿ: ಇಡೀ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದ್ದ ದೆಹಲಿ ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳ ಕುತ್ತಿಗೆಗೆ ಸೂರ್ಯೋದಯಕ್ಕೂ ಮುನ್ನವೇ ಕುಣಿಕೆ ಬಿದಿದ್ದೆ. ಆ ಮೂಲಕ ಏಳು ವರ್ಷಗಳ ಬಳಿಕ ನಿರ್ಭಯಾ ಸಾವಿಗೆ ನ್ಯಾಯ ಸಿಕ್ಕಿದೆ. 

ಅಪರಾಧಿಗಳಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್ ಮತ್ತು ಮುಕೇಶ್ ಸಿಂಗ್  ಹಾಗೂ ಪವನ್ ಗುಪ್ತಾ ಕೊನೆಯವರೆಗೂ ಕಾನೂನು ಹೋರಾಟ ನಡೆಸಿದರೂ ಸಾವಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇಂದು ಮುಂಜಾನೆ 5-30ರಲ್ಲಿ  ತಿಹಾರ್ ಜೈಲಿನಲ್ಲಿ ನೇಣುಗಂಬಕ್ಕೆ ಏರಿಸಲಾಗಿದೆ.ಇದರೊಂದಿಗೆ ಏಳು ವರ್ಷಗಳಿಂದ ನಡೆದ ಬೃಹನ್ನಾಟಕಕ್ಕೆ ತೆರೆ ಬಿದ್ದಿದೆ.

ನಾಲ್ಕು ಬಾರಿ ಡೆತ್ ವಾರೆಂಟ್ ಪಡೆದರೂ ಗಲ್ಲು ಶಿಕ್ಷೆ ರದ್ದುಪಡಿಸಬೇಕೆಂದು ಸುಪ್ರೀಂಕೋರ್ಟ್, ಹೈಕೋರ್ಟ್ ಗೆ  ಮೊರೆ ಹೋಗಿದ್ದರು. ಆದರೆ, ಎಲ್ಲಾ ಕಡೆಗಳಲ್ಲಿ ಅರ್ಜಿ ವಜಾಗೊಂಡು ಇಂದು ಕೊನೆಯ ಉಸಿರೆಳೆದಿದ್ದಾರೆ. 

ನೇಣುಗಂಬವೇರಿಸುವ ಮುನ್ನ  ತಿಹಾರ್ ಜೈಲಿನ  ಆರೋಗ್ಯಾಧಿಕಾರಿಗಳಿಂದ ನಾಲ್ವರು ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ನಂತರ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಅಪರಾಧಿಗಳ ಅಂತಿಮ ಇಚ್ಚೆಯನ್ನು ಕೇಳಲಾಗಿದೆ. ಆದರೆ, ಅಂತಿಮ ಇಚ್ಚೆಗಳಿಗೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂಬುದು ತಿಳಿದುಬಂದಿದೆ.

ಕಪ್ಪು ಬಟ್ಟೆ ಧರಿಸಿದ ಕೈದಿಗಳನ್ನು ವಾರ್ಡನ್ ಹಾಗೂ ಹೆಡ್ ವಾರ್ಡನ್ ಗಲ್ಲು ಕೋಣೆಗೆ ಕರೆತಂದಿದ್ದು, ಡೆತ್ ವಾರೆಂಟ್ ಗೆ ಮ್ಯಾಜಿಸ್ಟ್ರೇಟ್ ಸಹಿ ಹಾಕಿದ್ದಾರೆ.ಅಪರಾಧಿಗಳ ಎದುರು ವಾರೆಂಟ್  ಓದಿದ ನಂತರ ಅವರಿಗೆ ಗಲ್ಲು ಶಿಕ್ಷೆ ಜಾರಿ ಮಾಡಲಾಗಿದೆ. ಬಳಿಕ ಗಲ್ಲಿಗೇರಿಸಿದ ಅರ್ಧಗಂಟೆಯ ಬಳಿಕ ಅಪರಾಧಿಗಳ ಸಾವನ್ನ ವೈದ್ಯರು ಖಚಿತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಖೈದಿಗಳ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ