ನೀರಜ್ ಕುಮಾರ್ 
ದೇಶ

'ನಿರ್ಭಯ ಪ್ರಕರಣ: ನನ್ನ ಗೌರವವನ್ನು ಪಣಕ್ಕಿಟ್ಟಿದ್ದ 37 ವರ್ಷದ ವೃತ್ತಿ ಜೀವನದ ಅತ್ಯಂತ ಸವಾಲಿನ ಕೇಸ್!'

ನಿರ್ಭಯ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದ್ದು, ಈ ಬಗ್ಗೆ ಅತ್ಯಾಚಾರ ಘಟನೆ ನಡೆದಾಗ ದೆಹಲಿ ಪೊಲೀಸ್ ಮುಖ್ಯಸ್ಥರಾಗಿದ್ದ ನೀರಜ್ ಕುಮಾರ್ ಮಾತನಾಡಿದ್ದಾರೆ.

ನವದೆಹಲಿ: ನಿರ್ಭಯ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದ್ದು, ಈ ಬಗ್ಗೆ ಅತ್ಯಾಚಾರ ಘಟನೆ ನಡೆದಾಗ ದೆಹಲಿ ಪೊಲೀಸ್ ಮುಖ್ಯಸ್ಥರಾಗಿದ್ದ ನೀರಜ್ ಕುಮಾರ್ ಮಾತನಾಡಿದ್ದಾರೆ.

ಅಪರಾಧಿಗಳನ್ನು ಗಲ್ಲಿಗೇರಿಸಿರುವ ಬಗ್ಗೆ ಸಮಾಧಾನ ವ್ಯಕ್ತಪಡಿಸಿರುವ 1976ರ ಬ್ಯಾಚ್ ನ ಐಪಿಎಸ್ ಅಧಿಕಾರಿ ನೀರಜ್ ಕುಮಾರ್, ದೇಶಾದ್ಯಂತ ಸುದ್ದಿ ಮಾಡಿದ್ದ ಈ ಪ್ರಕರಣದಿಂದ ನನ್ನ ವೃತ್ತಿ ಜೀವನದ ಗೌರವದ ಪ್ರಶ್ನೆಯಾಗಿತ್ತು. ನನ್ನ 37 ವರ್ಷಗಳ ವೃತ್ತಿ ಜೀವನದಲ್ಲೇ ಅತ್ಯಂತ ಸವಾಲಿನ ಪ್ರಕರಣ ಇದಾಗಿತ್ತು ಎಂದು ನೀರಜ್ ಕುಮಾರ್ ಹೇಳಿದ್ದಾರೆ. 

ಒಂದು ವೇಳೆ ಈ ಪ್ರಕರಣ ತಾರ್ಕಿಕ ಅಂತ್ಯ ಕಾಣದೇ ಇದ್ದಿದ್ದರೆ ನಾನು ವೃತ್ತಿ ಜೀವನದಲ್ಲಿ ಮಾಡಿದ್ದೆಲ್ಲವೂ ನಿರರ್ಥಕವಾಗಿಬಿಡುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. 

ಅತ್ಯಂತ ಮಹತ್ವದ ಪ್ರಕರಣಗಳಲ್ಲಿ ಯಶಸ್ಸು ಕಂಡಿದ್ದ ಅಧಿಕಾರಿಯಾಗಿದ್ದ ನೀರಜ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸುವಂತೆ ಮಾಡಿತ್ತು ನಿರ್ಭಯ ಅತ್ಯಾಚಾರ ಪ್ರಕರಣ. ನಿರ್ಭಯ ಅತ್ಯಾಚಾರ ಪ್ರಕರಣದಲ್ಲಿ ಅತ್ಯಂತ ಕೆಟ್ಟ ವಿವರಗಳು ಲಭ್ಯವಾಗುತ್ತಿದ್ದಂತೆಯೇ ಪೊಲೀಸ್ ತನಿಖಾ ತಂಡದಲ್ಲಿದ್ದವರ ಹೃದಯವೂ ಮರುಗಿತ್ತು ಎಂದು ನೀರಜ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ವಿರಾಟ್ ಕೊಹ್ಲಿ ಇದ್ದಿದ್ದರೆ ಫಲಿತಾಂಶ ಬೇರೆಯೇ ಆಗಿರುತ್ತಿತ್ತು'; ಗೌತಮ್ ಗಂಭೀರ್ ವಿರುದ್ಧ ಪಾಕ್ ಅನುಭವಿ ಆಟಗಾರ ಅಹ್ಮದ್ ಶೆಹಜಾದ್ ವಾಗ್ದಾಳಿ

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

SCROLL FOR NEXT