ಅಪರಾಧಿಗಳ ಮೃತದೇಹ ಸಾಗಿಸುತ್ತಿರುವ ಅಂಬ್ಯುಲೆನ್ಸ್ 
ದೇಶ

ನಿರ್ಭಯಾ ಹತ್ಯಾಚಾರಿಗಳ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ನಾಲ್ವರು ನಿರ್ಭಯಾ ಹತ್ಯಾಚಾರಿಗಳ ಮೃತದೇಹವನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತಿಮ ಸಂಸ್ಕಾರ ನಡೆಸಲು ಅವರ ಕುಟುಂಬ ವರ್ಗಕ್ಕೆ ಹಸ್ತಾಂತರಿಸಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ನವದೆಹಲಿ: ನಾಲ್ವರು ನಿರ್ಭಯಾ ಹತ್ಯಾಚಾರಿಗಳ ಮೃತದೇಹವನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತಿಮ ಸಂಸ್ಕಾರ ನಡೆಸಲು ಅವರ ಕುಟುಂಬ ವರ್ಗಕ್ಕೆ ಹಸ್ತಾಂತರಿಸಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಇಂದು ಬೆಳಗ್ಗೆ 5-30ರಲ್ಲಿ ಅಪರಾಧಿಗಳಾದ ಮುಕೇಶ್ ಸಿಂಗ್ (32) ಪವನ್ ಗುಪ್ತಾ (25) ವಿನಯ್ ಶರ್ಮಾ (26) ಹಾಗೂ ಅಕ್ಷಯ್ ಸಿಂಗ್ (31) ಅವರನ್ನು ಗಲ್ಲಿಗೇರಿಸಲಾಗಿತ್ತು.

ಕಾರಾಗೃಹದ ನಿಯಮದ ಪ್ರಕಾರ ಗಲ್ಲಿಗೇರಿಸಿದ ಬಳಿಕ ಅರ್ಧಗಂಟೆಗಳ ಕಾಲ ಮೃತದೇಹವನ್ನು ನೇತುಹಾಕಲಾಗಿತ್ತು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. 

ವೈದ್ಯರು ಮೃತದೇಹವನ್ನು ಪರೀಕ್ಷಿಸಿದ ನಂತರ ಎಲ್ಲರೂ ಮೃತಪಟ್ಟಿರುವುದು ಕಂಡುಬಂದಿತು. ನಂತರ ಮರಣೋತ್ತರ ಪರೀಕ್ಷೆಗಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಯಿತು. ಬಳಿಕ  ಅವರ ಕುಟುಂಬದವರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಯಿತು ಎಂದು ತಿಹಾರ್ ಜೈಲು ಮಹಾನಿರ್ದೇಶಕ ಸಂದೀಪ್ ಗೋಯೆಲ್ ಮಾಹಿತಿ ನೀಡಿದ್ದಾರೆ.

ಅಕ್ಷಯ್ ಮೃತದೇಹವನ್ನು ಬಿಹಾರದ ಔರಾಂಗಾಬಾದಿನ ಆತನ ಹಳ್ಳಿಗೆ ತೆಗೆದುಕೊಂಡು ಹೋಗಲಾಗಿದೆ. ಮುಕೇಶ್ ಮೃತದೇಹವನ್ನು ರಾಜಸ್ತಾನ, ವಿನಯ್ ಹಾಗೂ ಪವನ್ ಮೃತದೇಹವನ್ನು ದಕ್ಷಿಣ ದೆಹಲಿಯಲ್ಲಿನ ಅವರ ನಿವಾಸ ರವಿದಾಸ್ ಕ್ಯಾಂಪ್ ಗೆ  ತೆಗೆದುಕೊಂಡು ಹೋಗಲಾಯಿತು ಎಂದು ಅವರು ಹೇಳಿದ್ದಾರೆ. 

ಮರಣೋತ್ತರ ಪರೀಕ್ಷೆಗೂ ಮುನ್ನವೇ  ಕುಟುಂಬ ಸದಸ್ಯರು ದಿನ ದಯಾಳ್ ಆಸ್ಪತ್ರೆಗೆ ಬಂದಿದ್ದರು. 
ಆಸ್ಪತ್ರೆಯ ಶವಾಗಾರದ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಗಲ್ಲುಶಿಕ್ಷೆಗೊಳಗಾದವರ ಕುಟುಂಬಸ್ಥರು, ಸಂಬಂಧಿಕರನ್ನು ಹೊರತುಪಡಿಸಿ ಬೇರೆ ಯಾರಿಗೂ ಅಲ್ಲಿ ಪ್ರವೇಶ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ತಿಹಾರ್ ಜೈಲಿನಲ್ಲಿ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ನೇಣಿಗೇರಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್