ದೇಶ

ಆತಂಕ ನಿವಾರಣೆ: ಮಾಜಿ ಸಿಎಂ ಮತ್ತು ಪುತ್ರನಿಗೆ ಕೊರೋನಾ ಸೋಂಕು ಇಲ್ಲ!

Vishwanath S

ಜೈಪುರ: ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ಅವರ ಜೊತೆ ಕಾಣಿಸಿಕೊಂಡಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಹಾಗೂ ಅವರ ಪುತ್ರ ದುಶ್ಯಂತ್ ಅವರಿಗೆ ಸೋಂಕು ಹರಡಿಲ್ಲ ಎಂಬುದು ತಿಳಿದುಬಂದಿದೆ. 

ಈ ಬಗ್ಗೆ ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ ಅವರು ಟ್ವೀಟ್ ಮಾಡಿ ನಾನು ಹಾಗೂ ನನ್ನ ಪುತ್ರ ದುಶ್ಯಂತ್ ಸಿಂಗ್ ಕರೋನಾ ವೈರಸ್ ಸೋಂಕು ತಪಾಸಣೆಗೆ ಒಳಗಾಗಿದ್ದು ನಮ್ಮಲ್ಲಿ ಸೋಂಕು ಇಲ್ಲ ಎಂದು ವೈದ್ಯರು ದೃಢಪಡಿಸಿದ್ದಾಗಿ ಬರೆದುಕೊಂಡಿದ್ದಾರೆ. 

ವಸುಂಧರಾ ರಾಜೆ ಹಾಗೂ ಅವರ ಪುತ್ರನ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಇಬ್ಬರಿಗೂ ಸೋಂಕು ಹರಡಿಲ್ಲ ಎಂಬ ಮಾಹಿತಿ ಹೊರಬಿದ್ದಿವೆ.

ಇನ್ನು ಸಂಸದ ದುಶ್ಯಂತ್ ಸಿಂಗ್ ಲೋಕಸಭೆಯ ಕಲಾಪದಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಅವರ ಸಂಪರ್ಕಕ್ಕೆ ಬಂದವರಿಗೂ ಸೋಂಕು ಹರಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಇದೀಗ ಈ ವರದಿಯಿಂದ ಭೀತಿ ದೂರವಾಗಿದೆ.

SCROLL FOR NEXT