ಜ್ಯೋತಿರಾದಿತ್ಯ ಸಿಂಧಿಯಾ 
ದೇಶ

ಪಕ್ಷ ಸೇರಿದ 22 ಶಾಸಕರಿಗೂ ಬಿಜೆಪಿ ಟಿಕೆಟ್: ಜ್ಯೋತಿರಾದಿತ್ಯ ಸಿಂಧಿಯಾ 

ಮುಖ್ಯಮಂತ್ರಿ ಕಮಲ್​​ನಾಥ್​​​ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್​​ನ ರೆಬೆಲ್​​ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ  ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

ನವದೆಹಲಿ:  ಮುಖ್ಯಮಂತ್ರಿ ಕಮಲ್​​ನಾಥ್​​​ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್​​ನ ರೆಬೆಲ್​​ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ  ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ 22 ಮಂದಿ ಶಾಸಕರು  ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅವರೆಲ್ಲರಿಗೂ ಪಕ್ಷದಿಂ ಮುಂಬರುವ ವಿಧಾನಸಭೆ ಚುನಾವಣೆಗೆ ಅವರಿಗೆಲ್ಲಾ ಬಿಜೆಪಿಯಿಂದಲೇ ಟಿಕೆಟ್ ಸಿಗಲಿದೆ ಎೆಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಮಾರ್ಚ್ 10ನೇ ತಾರೀಕಿನಂದು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆದಿದ್ದರು. ಬಳಿಕ ಇವರು ಬಿಜೆಪಿ ಸೇರಿದ ನಂತರ ಸಿಂಧಿಯಾರನ್ನು ಬೆಂಬಲಿಸಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. 

ಇವರ ರಾಜೀನಾಮೆಯಿಂದ 15 ತಿಂಗಳ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು. ಈ ಮೂಲಕ ಮಧ್ಯಪ್ರದೇಶ ರಾಜಕೀಯ ಕಳೆದ ಕೆಲ ದಿನಗಳಿಂದ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಕೊಹಿಮಾ, ವಿಶಾಖಪಟ್ಟಣಂ, ಭುವನೇಶ್ವರ ಮಹಿಳೆಯರಿಗೆ ಸುರಕ್ಷಿತ ನಗರ; ಪಾಟ್ನಾ, ಜೈಪುರ ಅಸುರಕ್ಷಿತ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

SCROLL FOR NEXT