ಜ್ಯೋತಿರಾದಿತ್ಯ ಸಿಂಧಿಯಾ 
ದೇಶ

ಪಕ್ಷ ಸೇರಿದ 22 ಶಾಸಕರಿಗೂ ಬಿಜೆಪಿ ಟಿಕೆಟ್: ಜ್ಯೋತಿರಾದಿತ್ಯ ಸಿಂಧಿಯಾ 

ಮುಖ್ಯಮಂತ್ರಿ ಕಮಲ್​​ನಾಥ್​​​ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್​​ನ ರೆಬೆಲ್​​ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ  ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

ನವದೆಹಲಿ:  ಮುಖ್ಯಮಂತ್ರಿ ಕಮಲ್​​ನಾಥ್​​​ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನಗೊಳ್ಳಲು ಕಾರಣರಾದ 22 ಮಂದಿ ಕಾಂಗ್ರೆಸ್​​ನ ರೆಬೆಲ್​​ ಶಾಸಕರು ಬಿಜೆಪಿ ಸೇರಿದ್ದಾರೆ. ಈ 22 ಶಾಸಕರಿಗೂ  ಬಿಜೆಪಿ ಟಿಕೆಟ್ ನೀಡಲಿದೆ ಎಂದು ಜ್ಯೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ 22 ಮಂದಿ ಶಾಸಕರು  ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅವರೆಲ್ಲರಿಗೂ ಪಕ್ಷದಿಂ ಮುಂಬರುವ ವಿಧಾನಸಭೆ ಚುನಾವಣೆಗೆ ಅವರಿಗೆಲ್ಲಾ ಬಿಜೆಪಿಯಿಂದಲೇ ಟಿಕೆಟ್ ಸಿಗಲಿದೆ ಎೆಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಮಾರ್ಚ್ 10ನೇ ತಾರೀಕಿನಂದು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆದಿದ್ದರು. ಬಳಿಕ ಇವರು ಬಿಜೆಪಿ ಸೇರಿದ ನಂತರ ಸಿಂಧಿಯಾರನ್ನು ಬೆಂಬಲಿಸಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರು. 

ಇವರ ರಾಜೀನಾಮೆಯಿಂದ 15 ತಿಂಗಳ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು. ಈ ಮೂಲಕ ಮಧ್ಯಪ್ರದೇಶ ರಾಜಕೀಯ ಕಳೆದ ಕೆಲ ದಿನಗಳಿಂದ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯಲ್ಲಿ 'ವಂದೇ ಮಾತರಂ' ಚರ್ಚೆ: ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ ಚರ್ಚೆಯ ಅಗತ್ಯವೇನಿತ್ತು? ಪ್ರಿಯಾಂಕಾ ಗಾಂಧಿ, ಯಾದವ್ ತೀವ್ರ ಕಿಡಿ!

ಬೀದರ್: 'ಹಿಂದೂ' ಎನ್ನುವುದು ಧರ್ಮವೇ ಅಲ್ಲ, ಅದೊಂದು ಕೆಟ್ಟ ಬೈಗುಳ; ನಿವೃತ್ತ ನ್ಯಾಯಮೂರ್ತಿ

ನಿಮ್ಮ ಪತ್ನಿ ಭಾರತೀಯಳಲ್ಲವೇ? ವಲಸೆ ವಿಚಾರವಾಗಿ ಮತ್ತೆ 'ಅಪಹಾಸ್ಯ'ಕ್ಕೀಡಾದ ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್!

ಬೆಂಗಳೂರಿನಲ್ಲಿ ಹೆಚ್ಚಾದ ಗೋಕಳ್ಳತನ: ಲಕ್ಷಾಂತರ ರೂಪಾಯಿ ಮೌಲ್ಯದ ಹಸುಗಳ ಕದ್ದೊಯ್ದು ಕತ್ತು ಕೊಯ್ದ ದುರುಳರು!

ಮೈಸೂರು: ಉದ್ಯಮಿ ಅಪಹರಣ, ಸಿನಿಮೀಯ ರೀತಿಯಲ್ಲಿ ಪೊಲೀಸರ ಕಾರ್ಯಾಚರಣೆ, 4 ಗಂಟೆಯಲ್ಲೇ ರಕ್ಷಣೆ, ಐವರ ಬಂಧನ!

SCROLL FOR NEXT