ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಕೊರೋನಾ ವೈರಸ್‌ ಭೀತಿ: ಮಾ. 31ರ ವರೆಗೆ ಪಂಜಾಬ್ ಸಂಪೂರ್ಣ ಸ್ಥಬ್ಧ

ಕೊರೋನಾ ವೈರಸ್‌ ಸೋಂಕಿಗೆ ಭಾರತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಪಂಜಾಬ್ ಸರ್ಕಾರ ಮಾ. 31ರ ವರೆಗೆ ತನ್ನ ರಾಜ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲು ನಿರ್ಧರಿಸಿದೆ.

ಅಮೃತಸರ: ಕೊರೋನಾ ವೈರಸ್‌ ಸೋಂಕಿಗೆ ಭಾರತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಪಂಜಾಬ್ ಸರ್ಕಾರ ಮಾ. 31ರ ವರೆಗೆ ತನ್ನ ರಾಜ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲು ನಿರ್ಧರಿಸಿದೆ.

ಪಂಜಾಬ್ ನಲ್ಲಿ ಕೊರೋನಾ ಸೋಂಕು ವ್ಯಾಪಿಸುವುದನ್ನು ತಡೆಯುವ ಕ್ರಮವಾಗಿ ಪಂಜಾಬ್‌ ಅನ್ನು ಸಂಪೂರ್ಣ ಸ್ತಬ್ಧಗೊಳಿಸಲು ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ನಿರ್ಧರಿಸಿದ್ದಾರೆ. ಪಂಜಾಬ್ ನಲ್ಲಿ ಈಗಾಗಲೇ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 13ಕ್ಕೇರಿದ್ದು, ಈಗಾಗಲೇ ಮೂರು ಮಂದಿ ಸಾವನ್ನಪ್ಪಿದ್ದಾರೆ. 

ಇದೇ ಕಾರಣಕ್ಕೆ ಪಂಜಾಬ್ ಸಿಎಂ ಅಮರೀಂದರ್‌ ಸಿಂಗ್‌ ಮಾರ್ಚ್ 31ರವರೆಗೂ ಪಂಜಾಬ್ ರಾಜ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಲಭ್ಯತೆಯಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಲೂ ಸೂಚಿಸಲಾಗಿದೆ. ಅಂತೆಯೇ ಸರ್ಕಾರಿ ಸೇವೆಗಳು, ಜೀವನಾವಶ್ಯಕ ಪರಿಕಗಳನ್ನು ಮಾರಾಟ ಮಾಡುವ ಅಂಗಡಿಗಳು ನಿಷೇಧಾಜ್ಞೆಯ ವೇಳೆಯೂ ತೆರೆದಿರಲಿವೆ. 

ನಿಷೇಧಾಜ್ಞೆ ಜಾರಿ ಹೊಣೆಯನ್ನು ಡಿಸಿಗಳು ಮತ್ತು ಎಸ್‌ಎಸ್‌ಪಿಎಸ್‌ಗಳ ಹೆಗಲಿಗೆ ಹೊರಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT