ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಕೊರೋನಾ ವೈರಸ್‌ ಭೀತಿ: ಮಾ. 31ರ ವರೆಗೆ ಪಂಜಾಬ್ ಸಂಪೂರ್ಣ ಸ್ಥಬ್ಧ

ಕೊರೋನಾ ವೈರಸ್‌ ಸೋಂಕಿಗೆ ಭಾರತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಪಂಜಾಬ್ ಸರ್ಕಾರ ಮಾ. 31ರ ವರೆಗೆ ತನ್ನ ರಾಜ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲು ನಿರ್ಧರಿಸಿದೆ.

ಅಮೃತಸರ: ಕೊರೋನಾ ವೈರಸ್‌ ಸೋಂಕಿಗೆ ಭಾರತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಪಂಜಾಬ್ ಸರ್ಕಾರ ಮಾ. 31ರ ವರೆಗೆ ತನ್ನ ರಾಜ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲು ನಿರ್ಧರಿಸಿದೆ.

ಪಂಜಾಬ್ ನಲ್ಲಿ ಕೊರೋನಾ ಸೋಂಕು ವ್ಯಾಪಿಸುವುದನ್ನು ತಡೆಯುವ ಕ್ರಮವಾಗಿ ಪಂಜಾಬ್‌ ಅನ್ನು ಸಂಪೂರ್ಣ ಸ್ತಬ್ಧಗೊಳಿಸಲು ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ನಿರ್ಧರಿಸಿದ್ದಾರೆ. ಪಂಜಾಬ್ ನಲ್ಲಿ ಈಗಾಗಲೇ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 13ಕ್ಕೇರಿದ್ದು, ಈಗಾಗಲೇ ಮೂರು ಮಂದಿ ಸಾವನ್ನಪ್ಪಿದ್ದಾರೆ. 

ಇದೇ ಕಾರಣಕ್ಕೆ ಪಂಜಾಬ್ ಸಿಎಂ ಅಮರೀಂದರ್‌ ಸಿಂಗ್‌ ಮಾರ್ಚ್ 31ರವರೆಗೂ ಪಂಜಾಬ್ ರಾಜ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಲಭ್ಯತೆಯಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಲೂ ಸೂಚಿಸಲಾಗಿದೆ. ಅಂತೆಯೇ ಸರ್ಕಾರಿ ಸೇವೆಗಳು, ಜೀವನಾವಶ್ಯಕ ಪರಿಕಗಳನ್ನು ಮಾರಾಟ ಮಾಡುವ ಅಂಗಡಿಗಳು ನಿಷೇಧಾಜ್ಞೆಯ ವೇಳೆಯೂ ತೆರೆದಿರಲಿವೆ. 

ನಿಷೇಧಾಜ್ಞೆ ಜಾರಿ ಹೊಣೆಯನ್ನು ಡಿಸಿಗಳು ಮತ್ತು ಎಸ್‌ಎಸ್‌ಪಿಎಸ್‌ಗಳ ಹೆಗಲಿಗೆ ಹೊರಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!