ದೇಶ

ಕೊರೋನಾ ವೈರಸ್ ಭೀತಿ: ಮಾ.31ರವರೆಗೆ ಎಲ್ಲಾ ಪ್ರಯಾಣಿಕ ರೈಲು ಸಂಚಾರ ರದ್ದು

ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಎಲ್ಲಾ ರೈಲುಗಳ ಸಂಚಾರವನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.

ನವದೆಹಲಿ:ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಎಲ್ಲಾ ರೈಲುಗಳ ಸಂಚಾರವನ್ನು ಮಾರ್ಚ್ 31ರವರೆಗೆ ಸ್ಥಗಿತಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.

ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಎಲ್ಲಾ ಪ್ರಯಾಣಿಕ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು ಕೇವಲ ಗೂಡ್ಸ್ ರೈಲುಗಳು ಮಾತ್ರ ಸಂಚರಿಸಲಿವೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ರೈಲ್ವೆ ಮಂಡಳಿ ಪ್ರಯಾಣಿಕ ರೈಲು ಸಂಚಾರ ಸೇವೆಯನ್ನು ಸ್ಥಗಿತಗೊಳಿಸಿದೆ. ಕೇವಲ ಗೂಡ್ಸ್ ರೈಲು ಸಂಚರಿಸಲಿದೆ. ಉಪನಗರ ರೈಲುಗಳು ಮತ್ತು ಕೋಲ್ಕತ್ತಾ ಮೆಟ್ರೊ ಸೇವೆಗಳು ಇಂದು ಮಧ್ಯರಾತ್ರಿಯವರೆಗೆ ಸಂಚರಿಸಲಿವೆ. ಕಳೆದ ಮಾರ್ಚ್ 13ರಂದು ಮತ್ತು 16ರಂದು ರೈಲುಗಳಲ್ಲಿ ಸಂಚರಿಸಿದ 12 ಪ್ರಯಾಣಿಕರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಈ ಕ್ರಮ ಕೈಗೊಂಡಿದೆ. 

ಮಾರ್ಚ್ 31ರವರೆಗೆ ರೈಲು ರಾಜ್ಯಕ್ಕೆ ಬರಲು ಬಿಡಬೇಡಿ ಎಂದು ಜಾರ್ಖಂಡ್ ಸರ್ಕಾರ ರೈಲ್ವೆ ಮಂಡಳಿಗೆ ಪತ್ರ ಬರೆದಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT