ಸಂಗ್ರಹ ಚಿತ್ರ 
ದೇಶ

ಕೊರೋನಾ ಭೀತಿ: ಹಣಕಾಸು ವಿಧೇಯಕ ಅಂಗೀಕಾರದ ಬಳಿಕ ಸಂಸತ್ ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆ

ಹಣಕಾಸು ಮಸೂದೆ ಅಂಗೀಕಾರವಾದ ನಂತರ ಸಂಸತ್ತಿನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಧಿವೇಶನವನ್ನು ಈ ಹಿಂದೆ ಏಪ್ರಿಲ್ 3 ರಂದು ಮುಕ್ತಾಯಗೊಳಿಸಲು ನಿರ್ಧರಿಸಲಾಗಿತ್ತು.

ನವದೆಹಲಿ: ಹಣಕಾಸು ಮಸೂದೆ ಅಂಗೀಕಾರವಾದ ನಂತರ ಸಂಸತ್ತಿನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಅಧಿವೇಶನವನ್ನು ಈ ಹಿಂದೆ ಏಪ್ರಿಲ್ 3 ರಂದು ಮುಕ್ತಾಯಗೊಳಿಸಲು ನಿರ್ಧರಿಸಲಾಗಿತ್ತು.

ಕೋವಿಡ್-19 ಭಯದ ಕಾರಣದಿಂದ ಅಧಿವೇಶನವು ನಿಗದಿತ ಸಮಯಕ್ಕಿಂತ ಸುಮಾರು 12 ದಿನಗಳ ಮುಂಚಿತವಾಗಿ ಮುಕ್ತಾಯವಾಗಿದೆ.

ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷದ ನಾಯಕರು ಸೋಮವಾರ ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದು, ವಿವಿಧ ರಾಜ್ಯಗಳು ಘೋಷಿಸಿದ ಲಾಕ್‌ಡೌನ್‌ ಆಗಿರುವುದಲ್ಲದೆ ದೇಶಾದ್ಯಂತ ಕೊರೋನಾ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.

ಈ ನಡುವೆ ಕೊರೋನಾವೈರಸ್ ಹರಡುವಿಕೆಗೆ ಪ್ರತಿಯಾಗಿ ಕ್ಷೇತ್ರಗಳಿಗೆ ಸರ್ಕಾರವು ಯಾವಾಗ ಆರ್ಥಿಕ ಪ್ಯಾಕೇಜ್ ಘೋಷಿಸುತ್ತದೆ ಎಂದು ಕಾಂಗ್ರೆಸ್ ಸೇರಿದಂತೆ ಕೆಲವು ಪ್ರತಿಪಕ್ಷದ ಸದಸ್ಯರು ತಿಳಿಯಲು ಬಯಸಿದ್ದರಿಂದ ಸರ್ಕಾರ ಎರಡು ಮಸೂದೆಗಳನ್ನು ಪರಿಚಯಿಸಿತು ಹಾಗೆಯೇ ಇದೊಂದು ಅಸಾಧಾರಣ ಪರಿಸ್ಥಿತಿ ಎಂದು ಹೇಳಲಾಗಿದೆ. 

ಬಜೆಟ್ ಅಧಿವೇಶನ ಎರಡು ಹಂತಗಳಲ್ಲಿ ನಡೆಇದ್ದು . ಮೊದಲ ಹಂತವು ಜನವರಿ 31 ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 11 ರಂದು ಕೊನೆಯಾಗಿತ್ತು.ಮಾರ್ಚ್ 2 ರಂದು ಪ್ರಾರಂಭವಾದ ಎರಡನೇ ಹಂತದ ಅಧಿವೇಶನ ಇಂದು ಮುಕ್ತಾಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT