ಸಂಗ್ರಹ ಚಿತ್ರ 
ದೇಶ

ಕೊರೋನಾ ಭೀತಿ: ಹಣಕಾಸು ವಿಧೇಯಕ ಅಂಗೀಕಾರದ ಬಳಿಕ ಸಂಸತ್ ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆ

ಹಣಕಾಸು ಮಸೂದೆ ಅಂಗೀಕಾರವಾದ ನಂತರ ಸಂಸತ್ತಿನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಧಿವೇಶನವನ್ನು ಈ ಹಿಂದೆ ಏಪ್ರಿಲ್ 3 ರಂದು ಮುಕ್ತಾಯಗೊಳಿಸಲು ನಿರ್ಧರಿಸಲಾಗಿತ್ತು.

ನವದೆಹಲಿ: ಹಣಕಾಸು ಮಸೂದೆ ಅಂಗೀಕಾರವಾದ ನಂತರ ಸಂಸತ್ತಿನ ಉಭಯ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಅಧಿವೇಶನವನ್ನು ಈ ಹಿಂದೆ ಏಪ್ರಿಲ್ 3 ರಂದು ಮುಕ್ತಾಯಗೊಳಿಸಲು ನಿರ್ಧರಿಸಲಾಗಿತ್ತು.

ಕೋವಿಡ್-19 ಭಯದ ಕಾರಣದಿಂದ ಅಧಿವೇಶನವು ನಿಗದಿತ ಸಮಯಕ್ಕಿಂತ ಸುಮಾರು 12 ದಿನಗಳ ಮುಂಚಿತವಾಗಿ ಮುಕ್ತಾಯವಾಗಿದೆ.

ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷದ ನಾಯಕರು ಸೋಮವಾರ ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದು, ವಿವಿಧ ರಾಜ್ಯಗಳು ಘೋಷಿಸಿದ ಲಾಕ್‌ಡೌನ್‌ ಆಗಿರುವುದಲ್ಲದೆ ದೇಶಾದ್ಯಂತ ಕೊರೋನಾ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.

ಈ ನಡುವೆ ಕೊರೋನಾವೈರಸ್ ಹರಡುವಿಕೆಗೆ ಪ್ರತಿಯಾಗಿ ಕ್ಷೇತ್ರಗಳಿಗೆ ಸರ್ಕಾರವು ಯಾವಾಗ ಆರ್ಥಿಕ ಪ್ಯಾಕೇಜ್ ಘೋಷಿಸುತ್ತದೆ ಎಂದು ಕಾಂಗ್ರೆಸ್ ಸೇರಿದಂತೆ ಕೆಲವು ಪ್ರತಿಪಕ್ಷದ ಸದಸ್ಯರು ತಿಳಿಯಲು ಬಯಸಿದ್ದರಿಂದ ಸರ್ಕಾರ ಎರಡು ಮಸೂದೆಗಳನ್ನು ಪರಿಚಯಿಸಿತು ಹಾಗೆಯೇ ಇದೊಂದು ಅಸಾಧಾರಣ ಪರಿಸ್ಥಿತಿ ಎಂದು ಹೇಳಲಾಗಿದೆ. 

ಬಜೆಟ್ ಅಧಿವೇಶನ ಎರಡು ಹಂತಗಳಲ್ಲಿ ನಡೆಇದ್ದು . ಮೊದಲ ಹಂತವು ಜನವರಿ 31 ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 11 ರಂದು ಕೊನೆಯಾಗಿತ್ತು.ಮಾರ್ಚ್ 2 ರಂದು ಪ್ರಾರಂಭವಾದ ಎರಡನೇ ಹಂತದ ಅಧಿವೇಶನ ಇಂದು ಮುಕ್ತಾಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT