ದೇಶ

ಕೊರೋನ ಭೀತಿ: ನಾಳೆಯಿಂದ ಮಾ.31ರವರೆಗೆ ದೇಶೀಯ ವಿಮಾನ ಸೇವೆಗಳು ಲಾಕ್ ಡೌನ್

ಕೊರೋನಾವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತೊಂದು ಮಹತ್ವ ಹೆಜ್ಜೆ ಇಟ್ಟಿದ್ದು, ನಾಳೆಯಿಂದ ಎಲ್ಲಾ ದೇಶೀಯ ವಿಮಾನ ಸೇವೆ ರದ್ದುಗೊಳಿಸಲಿದೆ.

ನವದೆಹಲಿ: ಕೊರೋನಾವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತೊಂದು ಮಹತ್ವ ಹೆಜ್ಜೆ ಇಟ್ಟಿದ್ದು, ನಾಳೆಯಿಂದ ಎಲ್ಲಾ ದೇಶೀಯ ವಿಮಾನ ಸೇವೆ ರದ್ದುಗೊಳಿಸಲಿದೆ.

ಎಲ್ಲ ವಿಮಾನಯಾನ ಸಂಸ್ಥೆಗಳು ತಮ್ಮ ವಿಮಾನ ಸೇವೆಗಳು ಮಾ.24ರ ರಾತ್ರಿ 11:59ರೊಳಗಾಗಿ ತಮ್ಮ ಹಾರಾಟ ಸ್ಥಗಿತಗೊಳಿಸುವಂತೆ ಕೇಂದ್ರ ಹೇಳಿದೆ.

ಬುಧವಾರದ ನಂತರ ಕೇವಲ ಸರಕು ವಿಮಾನಗಳಿಗೆ ಮಾತ್ರ ಅವಕಾಶವಿರಲಿದೆ. ಸರಕಾರ ಈಗಾಗಲೇ ಅಂತಾರಾಷ್ಟ್ರೀಯ ವಿಮಾನಗಳನ್ನು ಒಂದು ವಾರ ನಿಷೇಧಿಸಿದೆ.

ದೇಶದಲ್ಲಿನ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 415ಕ್ಕೆ ತಲುಪಿದ ನಂತರ ಕೇಂದ್ರ ದೇಶೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದೆ.

ದೆಹಲಿಗೆ ಆಗಮಿಸಲು ಅಥವಾ ಅಲ್ಲಿಂದ ನಿರ್ಗಮಿಸಲು ಯಾವುದೇ ವಿಮಾನಗಳಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಭಾನುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು.

ಪಶ್ಚಿಮ ಬಂಗಾಳಕ್ಕೆ ಎಲ್ಲಾ ವಿಮಾನ ಹಾರಾಟ ರದ್ದುಗೊಳಿಸುವಂತೆ ಇಂದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT