ಚುನಾವಣಾ ಆಯೋಗ 
ದೇಶ

ಕೊರೋನಾ ವೈರಸ್ ಭೀತಿ: ರಾಜ್ಯಸಭೆ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ನಡೆಯಬೇಕಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮುಂದೂಡಿಕೆ ಮಾಡಿದೆ. 

ನವದೆಹಲಿ: ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ನಡೆಯಬೇಕಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮುಂದೂಡಿಕೆ ಮಾಡಿದೆ. 

ಈ ಕುರಿತಂತೆ ಮಂಗಳವಾರ ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ, ಕೊರೋನಾ ಭೀತಿಯ ಹಿನ್ನಲೆಯಲ್ಲಿ ರಾಜ್ಯಸಭೆ ಚುನಾವಣೆಯನ್ನು ಮುಂದೂಡಲಾಗಿದೆ. ಇದೇ ಗರುವಾರ(ಮಾ.26)ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಮಾ.31ರ ಬಳಿಕ ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯಸಭೆ ಚುನಾವಣೆ ವೇಳೆ ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರು, ಚುನಾವಣಾ ಅಧಿಕಾರಿಗಳು ಹಾಗೂ ಶಾಸಕರು ಒಂದೆಡೆ ಸೇರಬೇಕಾಗುತ್ತದೆ. ಕೊರೊನಾ ವೈರಸ್ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಎಲ್ಲರನ್ನೂ ಒಂದು ಕಡೆ ಸೇರಿಸುವುದು ಉಚಿತವಲ್ಲ. ಈ ಕಾರಣಕ್ಕೆ ಚುನಾವಣೆಯನ್ನೇ ಮುಂದೂಡಿರುವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ದೇಶದ ವಿವಿಧ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT