ಸಾಂದರ್ಭಿಕ ಚಿತ್ರ 
ದೇಶ

ಲಕ್ಷಾಂತರ ಗುತ್ತಿಗೆ ನೌಕರರಿಗೆ ಸಂಪೂರ್ಣ ವೇತನ ಬಿಡುಗಡೆಗೆ ರೈಲ್ವೆ ಇಲಾಖೆ ನಿರ್ಧಾರ

ಮಾರ್ಚ್ 31ರವರೆಗೂ ಎಲ್ಲಾ ರೀತಿಯ ಪ್ಯಾಸೆಂಜರ್ ಸೇವೆಯನ್ನು ರದ್ದುಗೊಳಿಸಿದ್ದರೂ ಲಕ್ಷಾಂತರ ಗುತ್ತಿಗೆ ನೌಕರರಿಗೆ ಪೂರ್ಣ ವೇತನ ನೀಡಲು ರೈಲ್ವೆ ನಿರ್ಧರಿಸಿದೆ.

ನವದೆಹಲಿ: ಮಾರ್ಚ್ 31ರವರೆಗೂ ಎಲ್ಲಾ ರೀತಿಯ ಪ್ಯಾಸೆಂಜರ್ ಸೇವೆಯನ್ನು ರದ್ದುಗೊಳಿಸಿದ್ದರೂ ಲಕ್ಷಾಂತರ ಗುತ್ತಿಗೆ ನೌಕರರಿಗೆ ಪೂರ್ಣ ವೇತನ ನೀಡಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ದೇಶಾದ್ಯಂತ ಕೊರೋನಾವೈರಸ್ ಹಿನ್ನೆಲೆಯಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಲಕ್ಷಾಂತರ ಗುತ್ತಿಗೆ ನೌಕರರು ನಿಲ್ದಾಣದ ಹೌಸ್ ಕೀಪಿಂಗ್ ಸೇವೆ, ನೈರ್ಮಲ್ಯೀಕರಣ, ಪ್ಯಾಂಟ್ರಿ ಕಾರ್ , ಮತ್ತಿತರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. 

ಮತ್ತೊಂದೆಡೆ ಕೆಲ ನೌಕರರು ಕಡಿಮೆ ಅವಧಿಯಲ್ಲಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಎಲ್ಲಾ ಗುತ್ತಿಗೆ ನೌಕರರಿಗೂ ಗರಿಷ್ಠ ಪಾವತಿ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. 

ಯಾವುದೇ ರೀತಿಯ ಗುತ್ತಿಗೆ ನೌಕರರಿಗೆ ದೊಡ್ಡ ಮೊತ್ತದ ಪರಿಹಾರ ನೀಡಲಾಗಿದೆ. ರೈಲುಗಳ ಓಡಾಟ ಇಲ್ಲದಿದ್ದರೂ ಶೇಕಡಾ 100 ರಷ್ಟು ವೇತನವನ್ನು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇವೆಯನ್ನು ನಿರ್ಬಂಧಿಸಿದ್ದರೂ ಸಹ ಮಾನವೀಯತೆ ಆಧಾರದ ಮೇಲೆ ಇವರೆಲ್ಲರಿಗೂ ಪೂರ್ಣ ವೇತನ ಬಿಡುಗಡೆ ಮಾಡುವಂತೆ ರೈಲ್ವೆ ಮಂಡಳಿ ವಲಯಗಳಿಗೆ ಸಲಹೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT