ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್ ಎಫೆಕ್ಟ್: ಎನ್ ಪಿಆರ್-ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರಿಷ್ಕರಣೆ ಮುಂದೂಡಿದ ಕೇಂದ್ರ ಸರ್ಕಾರ

ಕೊರೋನಾ ವೈರಸ್ ಸೋಂಕು (ಕೋವಿಡ್–19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಕೊರೋನಾ ವೈರಸ್ ಸೋಂಕು (ಕೋವಿಡ್–19) ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ತಿಳಿದುಬಂದಿದೆ.

2021ರ ಮೊದಲ ಹಂತದ ಜನಗಣತಿ ಮತ್ತು ಎನ್‌ಪಿಆರ್‌ ಅನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಇದೇ ಎಪ್ರಿಲ್ 1ರಿಂದ ಮೊದಲ ಹಂತದ ಎನ್ ಪಿಆರ್ ಮತ್ತು ಜನಗಣತಿಯು ಆರಂಭವಾಗಬೇಕಿತ್ತು. ಆದರೆ ಮುಂದಿನ 21 ದಿನಗಳ  ಕಾಲ ದೇಶಾದ್ಯಂತ ಲಾಕ್ ಡೌನ್ ಹೇರಿರುವ ಹಿನ್ನಲೆಯಲ್ಲಿ ಎನ್ ಪಿಆರ್ ಮತ್ತು ಜನಗಣತಿಯನ್ನು ಮುಂದೂಡಲಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವಾಲಯವು ಎನ್ ಪಿಆರ್ ಕುರಿತ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ಹೇಳಿತ್ತು.

ಕೊವಿಡ್‌–19 ಸೋಂಕು ಭೀತಿ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್‌ಪಿಆರ್‌ನಂತಹ ಯೋಜನೆಗಳನ್ನು ಸರ್ಕಾರ ಮುಂದೂಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರವನ್ನು ಇತ್ತೀಚೆಗೆ ಒತ್ತಾಯಿಸಿದ್ದವು. ಇದಕ್ಕೂ ಮೊದಲು ಬಿಜೆಪಿಯೇತರ  ಸರ್ಕಾರಗಳಿರುವ ಕೇರಳ, ಪಶ್ಚಿಮ ಬಂಗಾಳ, ಪಂಜಾಬ್, ರಾಜಸ್ಥಾನ, ಛತ್ತೀಸ್ ಘಡ ಮತ್ತು ಬಿಹಾರ ರಾಜ್ಯಗಳು ಎನ್ ಪಿಆರ್ ವಿರೋಧಿಸಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT