ದೇಶ

21 ಲಾಕ್ ಡೌನ್ ಅವಧಿಯಲ್ಲಿ ಕೆಲವು ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಕೆ

Vishwanath S

ನವದೆಹಲಿ: ಕೊರೊನಾ ವೈರಾಣು ಸೋಂಕು ನಿಗ್ರಹ ಸಂಬಂಧ ದೇಶಾದ್ಯಂತ 21 ದಿನಗಳ ಲಾಕ್ ಡೌನ ಸಂದರ್ಭದಲ್ಲಿ ಕೆಲವು ಕೃಷಿ ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಮಾರ್ಗಸೂಚಿ ಪ್ರಕಟಿಸಿದೆ.

ಕೃಷಿ ಉತ್ಪನ್ನಗಳನ್ನು ಖರೀದಿಸುವ ಸಂಸ್ಥೆಗಳು, ಎಪಿಎಂಸಿ ಅಥವಾ ಸರ್ಕಾರದ ಮಾನ್ಯತೆ ಪಡೆದು ಕಾರ್ಯನಿರ್ವಹಿಸುತ್ತಿರುವ ಮಂಡಿಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ.

ಭಾರತದಲ್ಲಿ 800ರ ಗಡಿ ದಾಡಿದ ಸೋಂಕಿತರ ಸಂಖ್ಯೆ!
ಇದೇ ವೇಳೆ ಭಾರತದಲ್ಲೂ ಇಂದು ಹೊಸದಾಗಿ 160 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ 887 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಹೀಗಾಗಲೆ 20 ಮಂದಿ ಮೃತಪಟ್ಟಿದ್ದಾರೆ.

SCROLL FOR NEXT