ನರೇಂದ್ರ ಮೋದಿ 
ದೇಶ

ಲಾಕ್ ಡೌನ್ ಉಲ್ಲಂಘಿಸಿ ಹೊರಗೆ ಬಂದವರನ್ನು 14 ದಿನ ಕ್ವಾರಂಟೈನ್​ನಲ್ಲಿಡಿ: ರಾಜ್ಯಗಳಿಗೆ ಕೇಂದ್ರ ಖಡಕ್ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅವರು ಕೈಮುಗಿದು ಲಾಕ್ ಡೌನ್ ಸಮಯದಲ್ಲಿ ಮನೆಯಲ್ಲೇ ಇರುವಂತೆ ಮನವಿ ಮಾಡಿದರೂ ಕೇಳದೆ ಸುಖಾ ಸುಮ್ಮನೆ ಹೊರಗೆ ತಿರುಗುತ್ತಿರುವವರು ಇನ್ನು ಮುಂದೆ 14 ಕ್ವಾರಂಟೈನ್​ನಲ್ಲಿರಬೇಕಾಗುತ್ತದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೈಮುಗಿದು ಲಾಕ್ ಡೌನ್ ಸಮಯದಲ್ಲಿ ಮನೆಯಲ್ಲೇ ಇರುವಂತೆ ಮನವಿ ಮಾಡಿದರೂ ಕೇಳದೆ ಸುಖಾ ಸುಮ್ಮನೆ ಹೊರಗೆ ತಿರುಗುತ್ತಿರುವವರು ಇನ್ನು ಮುಂದೆ 14 ಕ್ವಾರಂಟೈನ್​ನಲ್ಲಿರಬೇಕಾಗುತ್ತದೆ. 

ಕೊರೋನಾ ವೈರಸ್ ವಿರುದ್ಧದ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾದಿ ಪಾಲಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ ನೀಡಿದೆ. ಇದೇ ವೇಳೆ ವಲಸಿಗ ಕಾರ್ಮಿಕರು ತಮ್ಮ ರಾಜ್ಯಗಳಿಗೆ ತೆರಳದಂತೆ ಗಡಿಯನ್ನು ಮುಚ್ಚಿ. ಮಾಲೀಕರು ಬಾಡಿಗೆ ಒತ್ತಾಯಿಸಬಾರದು. ಅದನ್ನು ಮೀರಿ ಒತ್ತಾಯಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದೆ.

ಕೆಲವರು ನಗರವಾಸಿಗಳು ಹಳ್ಳಿಗೆ ತೆರಳಲು ಮುಂದಾಗಿದ್ದು ಅವರನ್ನು ಅವರವರ ಮನೆಯಲ್ಲೇ ಉಳಿಯುವಂತೆ ನೋಡಿಕೊಳ್ಳಿ. ಕೊರೋನಾ ಮಹಾಮಾರಿಯನ್ನು ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಮಾನವಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಮರಣ ಮೃದಂಗವನ್ನು ಮುಂದುವರೆಸಿದ್ದು, ವೈರಸ್'ಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಇದರಂತೆ ಈವರೆಗೂ ದೇಶದಲ್ಲಿ 26 ಮಂದಿ ಮೃತಪಟ್ಟಿದ್ದು ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT