ಸಾಂದರ್ಭಿಕ ಚಿತ್ರ 
ದೇಶ

ಭಾರತದಲ್ಲಿ ಕೊರೋನಾ ಸೋಂಕು ಸಮುದಾಯ ಪ್ರಸರಣ ಹಂತ ತಲುಪಿದೆ:ಆತಂಕ ತಂದಿದೆ ಅಧಿಕಾರಿಯೊಬ್ಬರ ಹೇಳಿಕೆ

21 ದಿನಗಳ ಲಾಕ್ ಡೌನ್ ನೀಡಿ ಮುನ್ನೆಚ್ಚರಿಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿದರೂ ಕೂಡ ಭಾರತದಲ್ಲಿ ಕೊರೋನಾ ಸೋಂಕು ಮೂರನೇ ಅಥವಾ ಸಮುದಾಯ ಹರಡುವಿಕೆ ಹಂತಕ್ಕೆ ತಲುಪಿದೆ ಎಂದು ಅಧಿಕೃತ ಮೂಲಗಳಿಂದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ಸಿಕ್ಕಿದೆ.

ನವದೆಹಲಿ: 21 ದಿನಗಳ ಲಾಕ್ ಡೌನ್ ನೀಡಿ ಮುನ್ನೆಚ್ಚರಿಕೆಯನ್ನು ಕೇಂದ್ರ ಸರ್ಕಾರ ಘೋಷಿಸಿದರೂ ಕೂಡ ಭಾರತದಲ್ಲಿ ಕೊರೋನಾ ಸೋಂಕು ಮೂರನೇ ಅಥವಾ ಸಮುದಾಯ ಪಸರಿಸುವಿಕೆ ಹಂತಕ್ಕೆ ತಲುಪಿದೆ ಎಂದು ಅಧಿಕೃತ ಮೂಲಗಳಿಂದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ಸಿಕ್ಕಿದೆ.

ವಿದೇಶಗಳಿಂದ ಬಂದ ಅಥವಾ ವಿದೇಶಗಳಿಂದ ಬಂದ ಜನರೊಂದಿಗೆ ಸಂಪರ್ಕ ಹೊಂದಿಲ್ಲದವರಿಗೆ ಕೊರೋನಾ ವೈರಸ್ ತಗುಲಿರುವ ಮೂರು ಪ್ರಕರಣಗಳು ವರದಿಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮುದಾಯಗಳಲ್ಲಿ ಪತ್ತೆಯಾದ ಈ ಮೂರೂ ಕೇಸುಗಳು ಅತಿ ಜನಸಂಖ್ಯೆ ಇರುವ ಪ್ರದೇಶಗಳಲ್ಲಾಗಿದ್ದು ಕೊರೋನಾ ಯಾವ ಪ್ರಮಾಣದಲ್ಲಿ ಇಲ್ಲಿ ಹಬ್ಬುತ್ತಿದೆ, ಯಾವ ತೀವ್ರತೆಯಲ್ಲಿದೆ ಎಂದು ಎಲ್ಲಾ ಅಂಕಿಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಲಾಗುತ್ತಿದೆ. ಸಮುದಾಯಗಳಿಗೆ ಹಬ್ಬುವುದನ್ನು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ, ಇದೇ ಪ್ರಮಾಣದಲ್ಲಿ ಹಬ್ಬಿದರೆ ಅದು ಯಾವ ಹಂತಕ್ಕೆ ಹೋಗಬಹುದು ಎಂದು ಊಹಿಸಲು ಅಸಾಧ್ಯ ಎಂದು ಅಧಿಕಾರಿ ಹೇಳುತ್ತಾರೆ.

ನಿನ್ನೆ ಒಂದೇ ದಿನದಲ್ಲಿ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಭಾರತದಲ್ಲಿ ಸದ್ಯ 918 ಮಂದಿ ಸೋಂಕಿತರಿದ್ದಾರೆ. ಮೊನ್ನೆ ಶುಕ್ರವಾರ ಬೆಳಗಿನ ಹೊತ್ತಿಗೆ ಸೋಂಕಿತರ ಸಂಖ್ಯೆ 724 ಆಗಿತ್ತು.ಸಮುದಾಯಗಳಲ್ಲಿ ಕೊರೋನಾ ಪಸರಿಸಿರುವುದು ಪತ್ತೆಯಾದ ನಂತರ ಇದೀಗ ಯಾವುದೇ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರೆ ಅಂತವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಲಾಗುತ್ತಿದೆ. ಅಲ್ಲದೆ ಇತ್ತೀಚೆಗೆ ವಿದೇಶಗಳಿಂದ ಬಂದವರನ್ನು, ಅವರ ಜೊತೆ ನಿಕಟ ಸಂಪರ್ಕ ಹೊಂದಿದ್ದವರಲ್ಲಿ ಸಹ ಕೊರೋನಾ ಸೋಂಕು ಲಕ್ಷಣ ಕಾಣಿಸಿಕೊಂಡು ಪರೀಕ್ಷೆಗೊಳಪಡಿಸಲಾಗುತ್ತಿದೆ ಮತ್ತು ಆರೋಗ್ಯ ವಲಯಗಳಲ್ಲಿ ಕೆಲಸ ಮಾಡುವವರಲ್ಲಿ ಕೂಡ ಕಾಣಿಸಿಕೊಳ್ಳುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT