ಸಂಗ್ರಹ ಚಿತ್ರ 
ದೇಶ

ಕೊರೋನಾ ಲಾಕ್'ಡೌನ್ ಎಫೆಕ್ಟ್: ಸಂಚಾರ ವ್ಯವಸ್ಥೆಗಳಿಲ್ಲದೆ ನಡೆದು ನಡೆದು ವಲಸಿಗ ವ್ಯಕ್ತಿ ಸಾವು

ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್'ಡೌನ್ ಘೋಷಣೆ ಮಾಡಲಾಗಿದ್ದು, ಪರಿಣಾಮ ಸಂಚಾರ ವ್ಯವಸ್ಥೆಗಳಿಲ್ಲದೆ ಕಂಗಾಲಾಗಿರುವ ವಲಸಿಗರು ಮನೆಗಳಿಗೆ ಕಾಲ್ನಡಿಗೆ ಮೂಲಕ ತೆರಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು 200 ಕಿ,ಮೀವರೆಗೂ ಸುದೀರ್ಘವಾಗಿ ನಡೆದ ಪರಿಣಾಮ ವಲಸಿಗರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಲಖನೌ: ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್'ಡೌನ್ ಘೋಷಣೆ ಮಾಡಲಾಗಿದ್ದು, ಪರಿಣಾಮ ಸಂಚಾರ ವ್ಯವಸ್ಥೆಗಳಿಲ್ಲದೆ ಕಂಗಾಲಾಗಿರುವ ವಲಸಿಗರು ಮನೆಗಳಿಗೆ ಕಾಲ್ನಡಿಗೆ ಮೂಲಕ ತೆರಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಾರು 200 ಕಿ,ಮೀವರೆಗೂ ಸುದೀರ್ಘವಾಗಿ ನಡೆದ ಪರಿಣಾಮ ವಲಸಿಗರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ರಣವೀರ್ ಸಿಂಗ್ (39) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿ ಮಧ್ಯಪ್ರದೇಶದ ಮುರೈನಾ ಜಿಲ್ಲೆಯ ಅಂಬಾ ಗ್ರಾಮ ಮೂಲದವರಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ದೆಹಲಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಮನೆಗೆ ತೆರಳಲು ನಿರ್ಧರಿಸಿದ್ದ ಸಿಂಗ್ ಅವರು, ಸಂಚಾರ ವ್ಯವಸ್ಥೆಗಳಿಲ್ಲದ ಕಾರಣ ಕಾಲ್ನಡಿಗೆ ಮೂಲಕ ಮನೆಗೆ ತೆರಳಲು ನಿರ್ಧರಿಸಿದ್ದರು. 

ಕಾಲ್ನಡಿಗೆಯಲ್ಲಿ ತೆರಲುವ ವೇಳೆ ಮಾರ್ಗದ ಮಧ್ಯೆ ಆಹಾರ ಹಾಗೂ ನೀರಿನ ಕೊರತೆಗಳೂ ಎದುರಾಗಿದೆ. ಸುಮಾರು 200 ಕಿ.ಮೀ ಸುದೀರ್ಘವಾಗಿ ನಡೆದ ಬಳಿಕ ಸಿಂಗ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ವೇಳೆ ಜೊತೆಯಲ್ಲಿ ನಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿ, ವಿಚಾರಿಸಿದಾಗ ಎದೆನೋವಾಗುತ್ತಿರುವುದಾಗಿ ತಿಳಿಸಿದ್ದಾರೆ. ಬಳಿಕ ವಿಶ್ರಾಂತಿ ಪಡೆಯುವಂತೆ ತಿಳಿಸಿ, ಟೀ ನೀಡಿದ್ದಾರೆ. ಇದಾದ ಕೆಲವೇ ನಿಮಿಷಗಳಲ್ಲಿ ಸಿಂಗ್ ಅವರು ಸಾವನ್ನಪ್ಪಿದ್ದಾರೆ. 

ಇದೀಗ ವ್ಯಕ್ತಿಯ ಮೃತದೇಹವನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಲು ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT