ಲಾಕ್ ಡೌನ್ ಪರಿಣಾಮ: ಇಂಧನ ಕೊರತೆ ವಿಷಯವಾಗಿ ಬಿಪಿಸಿಎಲ್ ಹೇಳಿದ್ದಿಷ್ಟು! 
ದೇಶ

ಲಾಕ್ ಡೌನ್ ಪರಿಣಾಮ: ಇಂಧನ ಕೊರತೆ ವಿಷಯವಾಗಿ ಬಿಪಿಸಿಎಲ್ ಹೇಳಿದ್ದಿಷ್ಟು! 

ಲಾಕ್ ಡೌನ್ ಪರಿಣಾಮ ಎಲ್ಲಾ ದಿನನಿತ್ಯ ಬಳಕೆಯ ಪದಾರ್ಥಗಳಿಗೂ ಬೇಡಿಕೆ ಹೆಚ್ಚುತ್ತಿದ್ದು, ಪೂರೈಕೆ ಸವಾಲಿನ ಸಂಗತಿಯಾಗಿದೆ. 

ನವದೆಹಲಿ: ಲಾಕ್ ಡೌನ್ ಪರಿಣಾಮ ಎಲ್ಲಾ ದಿನನಿತ್ಯ ಬಳಕೆಯ ಪದಾರ್ಥಗಳಿಗೂ ಬೇಡಿಕೆ ಹೆಚ್ಚುತ್ತಿದ್ದು, ಪೂರೈಕೆ ಸವಾಲಿನ ಸಂಗತಿಯಾಗಿದೆ. 

21 ದಿನಗಳ ಕಾಲ ಪೂರೈಕೆಗೆ ಆಗುವಷ್ಟು ಇಂಧನ ಸಂಗ್ರಹ ಇದೆಯೇ ಎಂಬ ಪ್ರಶ್ನೆಗೆ  ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. (ಬಿಪಿಸಿಎಲ್) ಸ್ಪಷ್ಟನೆ ನೀಡಿದ್ದು, ಭಾರತದಲ್ಲಿ ಇಂಧನ ಕೊರತೆ ಎದುರಾಗುವುದಿಲ್ಲ. 21 ದಿನಗಳ ನಂತರವೂ ಸಾಕಷ್ಟು ಪ್ರಮಾಣದಲ್ಲಿ ಇಂಧನ ಲಭ್ಯವಾಗಲಿದೆ ಎಂದು ಹೇಳಿದೆ. 

21 ದಿನಗಳ ಲಾಕ್ ಡೌನ್ ನಿರ್ಧಾರ ಘೋಷಣೆಯಾದ ದಿನದಂದೇ ಇಂಡಿಯನ್ ಆಲಿಯ್ ಅಧ್ಯಕ್ಷ ಸಂಜೀವ್ ಸಿಂಗ್ ಅವರ ತಂದೆ ನಿಧನ ಹೊಂದಿದ್ದರು. ಈ ನೋವಿನ ಹೊರತಾಗಿಯೂ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಅಡಿಗೆ ಅನಿಲ ಸಮರ್ಪಕ ಪೂರೈಕೆಯಾಗುವಂತೆ ನಿಗಾ ವಹಿಸಿದ್ದರು. 

ದೇಶದಲ್ಲಿ ಇಂಧನ ಕೊರತೆ ಎದುರಾಗಿಲ್ಲ, ಎಲ್ ಪಿಜಿ ರಿಫಿಲಿಂಗ್ ಗೆ ಕಾಯ್ದಿರಿಸಬಹುದಾಗಿದೆ ಎಂದು ಸಂಜೀವ್ ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT