ದೆಹಲಿ ಸಿಎಂ ಕೇಜ್ರಿವಾಲ್ 
ದೇಶ

ದಯಮಾಡಿ ನೀವೆಲ್ಲಿದ್ದೀರೋ ಅಲ್ಲೇ ಇರಿ.. ನಾವೇ ಬಾಡಿಗೆ ಕಟ್ಟುತ್ತೇವೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಲಾಕ್ ಡೌನ್ ನಡುವೆಯೂ ತಮ್ಮ ತಮ್ಮ ಊರುಗಳಿಗೆ ತೆರಳಲು ಪರದಾಡುತ್ತಿರುವ ಕಾರ್ಮಿಕರನ್ನು ತಡೆಯುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಹರಸಾಹಸ ಪಡುತ್ತಿದ್ದು, ಕಾರ್ಮಿಕರು ಉಳಿದುಕೊಂಡಿರುವ ಮನೆಗಳ ಬಾಡಿಗೆಯನ್ನು ಸರ್ಕಾರವೇ ಭರಿಸುತ್ತದೆ. ದಯಮಾಡಿ ನೀವು  ಎಲ್ಲಿದ್ದೀರೋ ಅಲ್ಲೇ ಇರಿ ಎಂದು ಮನವಿ ಮಾಡಿಕೊಂಡಿದೆ.

ನವದೆಹಲಿ: ಲಾಕ್ ಡೌನ್ ನಡುವೆಯೂ ತಮ್ಮ ತಮ್ಮ ಊರುಗಳಿಗೆ ತೆರಳಲು ಪರದಾಡುತ್ತಿರುವ ಕಾರ್ಮಿಕರನ್ನು ತಡೆಯುವ ನಿಟ್ಟಿನಲ್ಲಿ ದೆಹಲಿ ಸರ್ಕಾರ ಹರಸಾಹಸ ಪಡುತ್ತಿದ್ದು, ಕಾರ್ಮಿಕರು ಉಳಿದುಕೊಂಡಿರುವ ಮನೆಗಳ ಬಾಡಿಗೆಯನ್ನು ಸರ್ಕಾರವೇ ಭರಿಸುತ್ತದೆ. ದಯಮಾಡಿ ನೀವು  ಎಲ್ಲಿದ್ದೀರೋ ಅಲ್ಲೇ ಇರಿ ಎಂದು ಮನವಿ ಮಾಡಿಕೊಂಡಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಕಾರ್ಮಿಕರ ಓಡಾಟ ಅತಿಯಾಗಿದೆ. ನಿಜಕ್ಕೂ ಭೀತಿ ಹುಟ್ಟಿಸುವ ರೀತಿಯಲ್ಲಿ ಕಾರ್ಮಿಕರು ತಮ್ಮ ಊರುಗಳತ್ತ ದೌಡಾಯಿಸಲು ಮುಂದಾಗಿದ್ದಾರೆ. ಆದರೆ ಇದು ನಿಜಕ್ಕೂ  ಅಪಾಯಕಾರಿಯಾದ ನಡೆ. ಏಕಾಏಕಿ ಸಾವಿರಾರು ಕಾರ್ಮಿಕರು ಸಂಚಾರ ನಡೆಸಿದರೆ ವೈರಸ್ ಹರಡುವ ಸಂಭವ ಹೆಚ್ಚಿರುತ್ತದೆ. ಇದರಿಂದ ಇತರರಿಗೂ ತೊಂದರೆ. ಇಡೀ ದೇಶಕ್ಕೆ ತೊಂದರೆ. ಹೀಗಾಗಿ ಕಾರ್ಮಿಕರು ಉಳಿದುಕೊಂಡಿರುವ ಮನೆಗಳಿಗೆ ಸರ್ಕಾರವೇ ಬಾಡಿಗೆ ಭರಿಸುತ್ತದೆ.  ದಯಮಾಡಿ ನೀವು ಎಲ್ಲಿ ಉಳಿದುಕೊಂಡಿದ್ದೀರೋ ಅಲ್ಲಿಯೇ ಉಳಿದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ದೆಹಲಿಗೆ ಉತ್ತರ ಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಮಿಕರು ಆಗಮಿಸಿದ್ದರು. ನಾನು ಕೈ ಮುಗಿದು ಕೇಳುತ್ತೇನೆ. ದಯಮಾಡಿ ನೀವೆಲ್ಲಿದ್ದೀರೋ ಅಲ್ಲಿಯೇ ಉಳಿದುಕೊಳ್ಳಿ. ಸಾವಿರಾರು ಕಾರ್ಮಿಕರು ಏಕಕಾಲದಲ್ಲಿ ಸಂಚಾರ ಮಾಡುತ್ತಿದ್ದು, ಇದು  ಅಪಾಯಕ್ಕೆ ಆಹ್ವಾನ ನೀಡಿದಂತೆ. ನಿಮ್ಮಲ್ಲಿ ಕೇವಲ ಮೂವರಿಗೆ ಸೋಂಕು ತಗಲಿದ್ದರೂ ಅವರಿಂದ ಹಲವರಿಗೆ ಸೋಂಕು ತಗಲುವ ಅಪಾಯವಿದೆ. ಕೊರೋನಾ ವಿರುದ್ದ ಹೋರಾಡಲು ಪ್ರಧಾನಿ ಮೋದಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ನೀವು ಲಾಕ್ ಡೌನ್ ನಿಯಮ ಪಾಲನೆ  ಮಾಡದಿದ್ದರೆ ದೇಶ ಕೊರೋನಾ ವಿರುದ್ಧ ಹೋರಾಟದಲ್ಲಿ ಸೋಲುತ್ತದೆ. ಈ ಹಿಂದೆ ಚೀನಾ ಮತ್ತು ಇಟಲಿಗಿಂತಲೂ ಧಾರುಣ ಪರಿಸ್ಥಿತಿ ಭಾರತದಲ್ಲಿ ಏದುರಾಗುತ್ತದೆ. ಆಗ ಸರ್ಕಾರ ಕೂಡ ಏನೂ ಮಾಡಲಾಗದ ಪರಿಸ್ಥಿತಿ ಬರುತ್ತದೆ. ದಯಮಾಡಿ ಆ ಪರಿಸ್ಥಿತಿ ತರಬೇಡಿ ಎಂದು ಕೇಜ್ರಿವಾಲ್  ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT