ದೆಹಲಿಯಲ್ಲಿ ಲಾಕ್ ಡೌನ್ 
ದೇಶ

ಕೊರೋನಾ ಹೆಮ್ಮಾರಿಗೆ ದೇಶದಲ್ಲಿ 28 ಬಲಿ: 1100 ಪಾಸಿಟಿವ್ ಪ್ರಕರಣಗಳು, ನಾಲ್ವರು ದೆಹಲಿ ಅಧಿಕಾರಿಗಳ ಅಮಾನತು

ಮಾರಕ ಕೊರೋನಾವೈರಸ್ ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ದೇಶಾದ್ಯಂತ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 28ಕ್ಕೆ ಏರಿಕೆ ಆಗಿದ್ದು, 1100 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ನವದೆಹಲಿ: ಮಾರಕ ಕೊರೋನಾವೈರಸ್ ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ದೇಶಾದ್ಯಂತ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 28ಕ್ಕೆ ಏರಿಕೆ ಆಗಿದ್ದು, 1100 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ವಲಸೆ ಕಾರ್ಮಿಕರಿಂದ ಮಾರಣಾಂತಿಕ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು  ಎಲ್ಲಾ ರಾಜ್ಯ ಹಾಗೂ ಜಿಲ್ಲಾ ಗಡಿಗಳನ್ನು ಬಂದ್ ಮಾಡುವಂತೆ ಆದೇಶಿಸಿರುವ ಕೇಂದ್ರ ಸರ್ಕಾರ, ಈಗಾಗಲೇ ವಲಸೆ ಹೋಗುತ್ತಿರುವವರನ್ನು 14 ದಿನಗಳ ಕ್ವಾರೆಂಟೈನ್ ಗೆ ಕಳುಹಿಸಲು ಸೂಚಿಸಿದೆ. 

ರಾಷ್ಟ್ರ ರಾಜಧಾನಿ ದೆಹಲಿವೊಂದಲ್ಲಿಯೇ  23 ಹೊಸ ಪ್ರಕರಣಗಳು ನಿನ್ನೆ ವರದಿಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 72 ಆಗಿದೆ. ನೊಯ್ಡಾ, ಮಹಾರಾಷ್ಟ್ರ , ಬಿಹಾರ ಮತ್ತಿತರ ರಾಜ್ಯಗಳಲ್ಲಿಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಮತ್ತೊಂದೆಡೆ ಲಾಕ್ ಡೌನ್ ಸಂದರ್ಭದಲ್ಲಿ  ಕರ್ತವ್ಯದಲ್ಲಿ ಗಂಭೀರ ಲೋಪ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ಇಬ್ಬರು ಹಿರಿಯ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಸೇವೆಯಿಂದ ಅಮಾನತು ಮಾಡಿದೆ. ಇತರ ಇಬ್ಬರಿಗೆ ಶೋಕಾಸ್ ನೋಟಿಸ್ ನೀಡಿದೆ.

ಸಾರಿಗೆ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT