ಸಾಂದರ್ಭಿಕ ಚಿತ್ರ 
ದೇಶ

ವೈದ್ಯರಿಂದ ಪ್ರಿಸ್ಕ್ರಿಪ್ಷನ್ ತಂದವರಿಗೆ ಮದ್ಯ ಮಾರಾಟ: ಕೇರಳ ಸರ್ಕಾರ ನಿರ್ಧಾರ

ಒಂದು ಕಡೆ ಕೊರೋನಾ ವೈರಾಣು ದಿನದಿಂದ ದಿನಕ್ಕೆ ದೇಶಾದ್ಯಂತ ಹರಡುತ್ತಿದ್ದರೆ.... ಮತ್ತೊಂದು ಕಡೆ ಮದ್ಯ ವ್ಯಸನಿಗಳು ಮದ್ಯಪಾನಕ್ಕಾಗಿ ಹಾಹಾಕಾರ ಸೃಷ್ಟಿಸುತ್ತಿದ್ದಾರೆ.

ತಿರುವನಂತಪುರ: ಒಂದು ಕಡೆ ಕೊರೋನಾ ವೈರಾಣು ದಿನದಿಂದ ದಿನಕ್ಕೆ ದೇಶಾದ್ಯಂತ ಹರಡುತ್ತಿದ್ದರೆ.... ಮತ್ತೊಂದು ಕಡೆ ಮದ್ಯ ವ್ಯಸನಿಗಳು ಮದ್ಯಪಾನಕ್ಕಾಗಿ ಹಾಹಾಕಾರ ಸೃಷ್ಟಿಸುತ್ತಿದ್ದಾರೆ. ಮದ್ಯ ಸಿಗದೆ ಪಾನ ಪ್ರೇಮಿಗಳು ಆತ್ಮಹತ್ಯೆಗೆ ಒಳಗಾಗುತ್ತಿರುವ ಘಟನೆಗಳು ದೇಶಾದ್ಯಂತ ವರದಿಯಾಗಿವೆ.

ವಿಶೇಷವಾಗಿ ಕರ್ನಾಟಕ, ತೆಲಂಗಾಣ,ಕೇರಳದಲ್ಲಿ ಆತ್ಮಹತ್ಯೆಗೊಳಗಾಗುತ್ತಿರುವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮದ್ಯ ವ್ಯಸನಿಗಳ ಆರ್ತನಾದಕ್ಕೆ ಮರುಗಿರುವ ಕೇರಳ ಸರ್ಕಾರ ಅವರಿಗೆ ಶುಭ ಸುದ್ದಿ ಪ್ರಕಟಿಸಿದೆ. 

ಕೇರಳದಲ್ಲಿ ಮದ್ಯ ಮಾರಾಟಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಸಿರು ನಿಶಾನೆ ತೋರಿಸಿದ್ದಾರೆ. ಆದರೆ, ಮದ್ಯ ಅಗತ್ಯವಿರುವವರು ವೈದ್ಯರ ಬಳಿಯಿಂದ ಔಷಧ ಚೀಟಿ(ಪ್ರಿಸ್ಕ್ರಿಪ್ಷನ್) ತಂದರೆ ಮಾತ್ರ ಮದ್ಯ ಮಾರಾಟ ಮಾಡಲಾಗುವುದು ಎಂಬ ಷರತ್ತು ವಿಧಿಸಿದೆ. 

ಸಾಧ್ಯವಾದರೆ ಆನ್‌ಲೈನ್‌ನಲ್ಲಿ ಮದ್ಯ ಪೂರೈಸಲು ಕೇರಳ ಅಧಿಕಾರಿಗಳು ಯೋಜಿಸುತ್ತಿದ್ದಾರೆ. ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಿಸಿರುವ ಕಾರಣ ಮದ್ಯದಂಗಡಿಗಳನ್ನು ಮುಚ್ಚಲಾಗಿದೆ. ಆದರೆ, ಕೇರಳದಲ್ಲಿ ಸೇವಿಸಲು ಮದ್ಯ ದೊರಕದ ಕಾರಣ ಒಂಬತ್ತು ಮಂದಿ ಆಲ್ಕೋಹಾಲ್ ಪ್ರೇಮಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು .. ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

ಈ ಹಿನ್ನಲೆಯಲ್ಲಿ ಅಬಕಾರಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಮುಖ್ಯಮಂತ್ರಿ ವಿಜಯನ್, ವೈದ್ಯರಿಂದ ಔಷಧ ಚೀಟಿ (ಪ್ರಿಸ್ಕ್ರಿಪ್ಷನ್) ತಂದವರಿಗೆ ಮಾತ್ರ ಮದ್ಯ ಮಾರಾಟ ಮಾಡಲು ನಿರ್ಧರಿಸಿದ್ದಾರೆ.

ಇನ್ನೂ ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿ ಮದ್ಯ ದೊರಯದೆ ಬೇಸತ್ತ ೬ ಮದ್ಯ ವ್ಯಸನಿಗಳು ಸೋಮವಾರ ಆತ್ಮ ಹತ್ಯೆಮಾಡಿಕೊಂಡಿದ್ದರು. ತೆಲಂಗಾಣದ ರಂಗಾರೆಡ್ಡಿ ಮತ್ತು ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT