ಸಾಂದರ್ಭಿಕ ಚಿತ್ರ 
ದೇಶ

ವೈದ್ಯರಿಂದ ಪ್ರಿಸ್ಕ್ರಿಪ್ಷನ್ ತಂದವರಿಗೆ ಮದ್ಯ ಮಾರಾಟ: ಕೇರಳ ಸರ್ಕಾರ ನಿರ್ಧಾರ

ಒಂದು ಕಡೆ ಕೊರೋನಾ ವೈರಾಣು ದಿನದಿಂದ ದಿನಕ್ಕೆ ದೇಶಾದ್ಯಂತ ಹರಡುತ್ತಿದ್ದರೆ.... ಮತ್ತೊಂದು ಕಡೆ ಮದ್ಯ ವ್ಯಸನಿಗಳು ಮದ್ಯಪಾನಕ್ಕಾಗಿ ಹಾಹಾಕಾರ ಸೃಷ್ಟಿಸುತ್ತಿದ್ದಾರೆ.

ತಿರುವನಂತಪುರ: ಒಂದು ಕಡೆ ಕೊರೋನಾ ವೈರಾಣು ದಿನದಿಂದ ದಿನಕ್ಕೆ ದೇಶಾದ್ಯಂತ ಹರಡುತ್ತಿದ್ದರೆ.... ಮತ್ತೊಂದು ಕಡೆ ಮದ್ಯ ವ್ಯಸನಿಗಳು ಮದ್ಯಪಾನಕ್ಕಾಗಿ ಹಾಹಾಕಾರ ಸೃಷ್ಟಿಸುತ್ತಿದ್ದಾರೆ. ಮದ್ಯ ಸಿಗದೆ ಪಾನ ಪ್ರೇಮಿಗಳು ಆತ್ಮಹತ್ಯೆಗೆ ಒಳಗಾಗುತ್ತಿರುವ ಘಟನೆಗಳು ದೇಶಾದ್ಯಂತ ವರದಿಯಾಗಿವೆ.

ವಿಶೇಷವಾಗಿ ಕರ್ನಾಟಕ, ತೆಲಂಗಾಣ,ಕೇರಳದಲ್ಲಿ ಆತ್ಮಹತ್ಯೆಗೊಳಗಾಗುತ್ತಿರುವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮದ್ಯ ವ್ಯಸನಿಗಳ ಆರ್ತನಾದಕ್ಕೆ ಮರುಗಿರುವ ಕೇರಳ ಸರ್ಕಾರ ಅವರಿಗೆ ಶುಭ ಸುದ್ದಿ ಪ್ರಕಟಿಸಿದೆ. 

ಕೇರಳದಲ್ಲಿ ಮದ್ಯ ಮಾರಾಟಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಸಿರು ನಿಶಾನೆ ತೋರಿಸಿದ್ದಾರೆ. ಆದರೆ, ಮದ್ಯ ಅಗತ್ಯವಿರುವವರು ವೈದ್ಯರ ಬಳಿಯಿಂದ ಔಷಧ ಚೀಟಿ(ಪ್ರಿಸ್ಕ್ರಿಪ್ಷನ್) ತಂದರೆ ಮಾತ್ರ ಮದ್ಯ ಮಾರಾಟ ಮಾಡಲಾಗುವುದು ಎಂಬ ಷರತ್ತು ವಿಧಿಸಿದೆ. 

ಸಾಧ್ಯವಾದರೆ ಆನ್‌ಲೈನ್‌ನಲ್ಲಿ ಮದ್ಯ ಪೂರೈಸಲು ಕೇರಳ ಅಧಿಕಾರಿಗಳು ಯೋಜಿಸುತ್ತಿದ್ದಾರೆ. ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಿಸಿರುವ ಕಾರಣ ಮದ್ಯದಂಗಡಿಗಳನ್ನು ಮುಚ್ಚಲಾಗಿದೆ. ಆದರೆ, ಕೇರಳದಲ್ಲಿ ಸೇವಿಸಲು ಮದ್ಯ ದೊರಕದ ಕಾರಣ ಒಂಬತ್ತು ಮಂದಿ ಆಲ್ಕೋಹಾಲ್ ಪ್ರೇಮಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು .. ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

ಈ ಹಿನ್ನಲೆಯಲ್ಲಿ ಅಬಕಾರಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ಮುಖ್ಯಮಂತ್ರಿ ವಿಜಯನ್, ವೈದ್ಯರಿಂದ ಔಷಧ ಚೀಟಿ (ಪ್ರಿಸ್ಕ್ರಿಪ್ಷನ್) ತಂದವರಿಗೆ ಮಾತ್ರ ಮದ್ಯ ಮಾರಾಟ ಮಾಡಲು ನಿರ್ಧರಿಸಿದ್ದಾರೆ.

ಇನ್ನೂ ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿ ಮದ್ಯ ದೊರಯದೆ ಬೇಸತ್ತ ೬ ಮದ್ಯ ವ್ಯಸನಿಗಳು ಸೋಮವಾರ ಆತ್ಮ ಹತ್ಯೆಮಾಡಿಕೊಂಡಿದ್ದರು. ತೆಲಂಗಾಣದ ರಂಗಾರೆಡ್ಡಿ ಮತ್ತು ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT