ಸಂಗ್ರಹ ಚಿತ್ರ 
ದೇಶ

ಕೊರೋನಾ ತಪಾಸಣೆ ಇಲ್ಲದೇ ಬಂದವರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ವ್ಯಕ್ತಿಯ ಬರ್ಬರ ಕೊಲೆ! 

ಮಹಾರಾಷ್ಟ್ರದಿಂದ ಕೊರೋನಾ ತಪಾಸಣೆ ಇಲ್ಲದೇ ಬಂದಿದ್ದ ಇಬ್ಬರು ವಲಸಿಗರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ವ್ಯಕ್ತಿಯನ್ನು ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಸೀತಾಮಾರ್ಹಿ ಜಿಲ್ಲೆಯಲ್ಲಿ ನಡೆದಿದೆ. 

ಬಿಹಾರ: ಮಹಾರಾಷ್ಟ್ರದಿಂದ ಕೊರೋನಾ ತಪಾಸಣೆ ಇಲ್ಲದೇ ಬಂದಿದ್ದ ಇಬ್ಬರು ವಲಸಿಗರ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ ವ್ಯಕ್ತಿಯನ್ನು ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಸೀತಾಮಾರ್ಹಿ ಜಿಲ್ಲೆಯಲ್ಲಿ ನಡೆದಿದೆ. 

ಘಟನೆ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದೆ. ಜಿಲ್ಲೆಯ ಮಧೌಲ್ ಗ್ರಾಮದ ನಿವಾಸಿ ಬಾಬೂಲ್ ಕುಮಾರ್ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ತಮ್ಮ ಊರಿಗೆ ಮಹಾರಾಷ್ಟ್ರದಿಂದ ಕೊರೋನಾ ತಪಾಸಣೆ ಇಲ್ಲದೇ ಬಂದಿದ್ದ ಮುನ್ನಾ ಮಹತೋ, ಸುಧೀರ್ ಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ವೈದ್ಯರ ತಂಡ ತಪಾಸಣೆ ನಡೆಸಿದೆ. ಆದರೆ ಕೋವಿಡ್-19 ರ ಯಾವುದೇ ಲಕ್ಷಣಗಳೂ ಗೋಚರಿಸಿಲ್ಲ. 

ವೈದ್ಯಾಧಿಕಾರಿಗಳ ತಂಡ ವಾಪಸ್ ತೆರಳುತ್ತಿದ್ದಂತೆಯೇ ಮುನ್ನಾ ಮಹತೋ, ಸುಧೀರ್ ಕುಮಾರ್ ಅವರ ಕುಟುಂಬದವರು ಬಾಬೂಲ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರವಾದ ಗಾಯಕ್ಕೊಳಗಾದ ಬಾಬೂಲ್ ಕುಮಾರ್ ನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಸಾವನ್ನಪ್ಪಿದ್ದಾನೆ. ಮೃತ ಬಾಬೂಲ್ ಕುಮಾರ್ ತಂದೆ ಪೊಲೀಸರಿಗೆ ಮುನ್ನಾ ಮಹತೋ, ಸುಧೀರ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT