ಮುಸ್ಲಿಂರು 
ದೇಶ

ಭಾರತದಲ್ಲಿ ಕೊರೋನಾಗೆ 'ನಿಜಾಮುದ್ದೀನ್' ಹಾಟ್ ಸ್ಪಾಟ್ ಆಗಿದ್ದೇಗೆ?

ಮಹಾಮಾರಿ ಕೊರೋನಾ ಜೊತೆಗೆ ದೇಶದಲ್ಲಿ ಇದೀಗ ಬಹು ಚರ್ಚೆಯಾಗುತ್ತಿರುವುದು ನಿಜಾಮುದ್ದೀನ್ ಮಸೀದಿ. 

ನವದೆಹಲಿ: ಮಹಾಮಾರಿ ಕೊರೋನಾ ಜೊತೆಗೆ ದೇಶದಲ್ಲಿ ಇದೀಗ ಬಹು ಚರ್ಚೆಯಾಗುತ್ತಿರುವುದು ನಿಜಾಮುದ್ದೀನ್ ಮಸೀದಿ. 

ಹೌದು ದೆಹಲಿಯಲ್ಲಿರುವ ಅಲಾಮಿ ಮರ್ಕಾಜ್ ಬಂಗ್ಲೇವಾಲಿ ಮಸೀದಿಯಲ್ಲಿ ಮಾರ್ಚ್ 10ರಂದು ಧಾರ್ಮಿಕ ಸಭೆ ನಡೆದಿತ್ತು. ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂರು ಸೇರಿದ್ದರು. ಇದೇ ವೇಳೆ ರಾಜ್ಯದಿಂದ 54 ಮಂದಿ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 

ಈ ಪೈಕಿ ತುಮಕೂರಿನ ಶಿರಾದಲ್ಲಿ ಮೃತಪಟ್ಟಿದ್ದ 60ವರ್ಷದ ವೃದ್ಧ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂಬುದು ಸ್ಪಷ್ಟವಾಗಿದೆ. ಇನ್ನು ತುಮಕೂರು ಹಾಗೂ ತಿಪಟೂರಿನಿಂದ ಒಟ್ಟು 13 ಮಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. 

ಮಾರ್ಚ್ 1ರಿಂದ 15ರವರೆಗೂ ನಡೆದ ತಬ್ಲಿಗಿ ಜಮಾಅತ್ ಧಾರ್ಮಿಕ ಕಾರ್ಯಕ್ರಮಕ್ಕೆ ಆಸ್ಟ್ರೇಲಿಯಾ, ಸಿಂಗಪೂರ್, ದುಬೈ, ಸೌದಿ ಅರೇಬಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಸುಮಾರು 2000ಕ್ಕೂ ಹೆಚ್ಚು ಧರ್ಮ ಪ್ರಚಾರಕರು, ಪ್ರವಾಸಿಗರು ಆಗಮಿಸಿದ್ದರು. ಇದೀಗ ಇಲ್ಲಿಂದಲೆ ದೇಶಾದ್ಯಂತ ಕೊರೋನಾ ಸೋಂಕು ಹರಡಿರುವ ಸಾಧ್ಯತೆ ಹೆಚ್ಚಿದ್ದು ತೀವ್ರ ನಿಗಾ ವಹಿಸಲಾಗಿದೆ.

ಮಾರ್ಚ್ 22 ಜನತಾ ಕರ್ಫ್ಯೂವರೆಗೂ ಆರು ಅಂತಸ್ಥಿನ ಈ ಮಸೀದಿಗೆ ವಿದೇಶಗಳಿಂದ ಹಾಗೂ ಇತರೆ ರಾಜ್ಯಗಳಿಂದ ಜನರು ಬಂದು ಹೋಗಿದ್ದರು. ಆನಂತರ ದೇಶದಲ್ಲಿ 21 ದಿನಗಳ ಲಾಕ್ ಡೌನ್ ಘೋಷಣೆಯಾದ ನಂತರ ಸಾವಿರಕ್ಕೂ ಹೆಚ್ಚು ಮಂದಿ ಕಟ್ಟಡದಲ್ಲೇ ಉಳಿದುಕೊಂಡಿದ್ದರು. 

ಇವರನ್ನು ಪೊಲೀಸರು ಸ್ಥಳಾಂತರಿಸುತ್ತಿದ್ದಾರೆ. ಈ ಪೈಕಿ 334 ಜನರನ್ನು ಆಸ್ಪತ್ರೆಗೆ ಹಾಗೂ 700 ಮಂದಿಯನ್ನು ಕ್ವಾರಂಟೈನ್ ಕೇಂದ್ರಗಳಿಗೆ ಬಸ್ ಗಳ ಮೂಲಕ ಸ್ಥಳಾಂತರಿಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT