ಸಾಂದರ್ಭಿಕ ಚಿತ್ರ 
ದೇಶ

ಮದ್ಯ ಸೇವನೆಯಿಂದ ಕೊರೊನಾ ಗಂಟಲಲ್ಲೇ ಸಾಯುತ್ತದೆ, ಮದ್ಯದಂಗಡಿ ತೆರೆಯಿರಿ: ಕಾಂಗ್ರೆಸ್‌ ಶಾಸಕ

ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೊನ ಸೋಂಕು ಹರಡದಂತೆ ತಪ್ಪಿಸಲು ದೇಶದಾದ್ಯಂತ ಲಾಕ್‌ಡೌನ್‌ ಘೋಷಣೆ ಮಾಡಲಾಗಿದೆ. ರಾಜಸ್ಥಾನದ ಕಾಂಗ್ರೆಸ್‌ನ ಶಾಸಕನೊಬ್ಬ ಮದ್ಯ ಸೇವನೆಯಿಂದ ಕೊರೊನಾ ವೈರಸ್‌ ಸಾಯುತ್ತೆ. ಹೀಗಾಗಿ ಮದ್ಯದಂಗಡಿ ಒಪನ್‌ ಮಾಡಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾನೆ.

ರಾಜಸ್ಥಾನ: ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೊನ ಸೋಂಕು ಹರಡದಂತೆ ತಪ್ಪಿಸಲು ದೇಶದಾದ್ಯಂತ ಲಾಕ್‌ಡೌನ್‌ ಘೋಷಣೆ ಮಾಡಲಾಗಿದೆ. ರಾಜಸ್ಥಾನದ ಕಾಂಗ್ರೆಸ್‌ನ ಶಾಸಕನೊಬ್ಬ ಮದ್ಯ ಸೇವನೆಯಿಂದ ಕೊರೊನಾ ವೈರಸ್‌ ಸಾಯುತ್ತೆ. ಹೀಗಾಗಿ ಮದ್ಯದಂಗಡಿ ಒಪನ್‌ ಮಾಡಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾನೆ. ಸದ್ಯ ಈತನ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ.

ರಾಜಸ್ಥಾನದ ಸಂಗೋಡ್‌ ಶಾಸಕ ಭರತ್‌ ಸಿಂಗ್ ಕುಂದಾನ್‌ಪುರ್‌ ಎಂಬವರು ಈ ಬಗ್ಗೆ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿದ್ದು ಮದ್ಯದಂಗಡಿ ತೆರೆಯಲು ಅವಕಾಶ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಆಲ್ಕೋಹಾಲ್ ಸ್ಯಾನಿಟೈಸರ್‌ನಿಂದ ಹ್ಯಾಂಡ್‌ವಾಶ್ ಮಾಡುವ ಮೂಲಕ ಕೊರೊನಾ ವೈರಸ್‌ ಸಾಯೋದಾದ್ರೆ. ಮದ್ಯ
ಸೇವನೆಯಿಂದಲೂ ಗಂಟಲಿನಲ್ಲಿರುವ ವೈರಸ್‌ಗಳು ಸಾಯುತ್ತದೆ ಎಂದು ಹೇಳಿಕೆ ನೀಡಿ ನಗೆಪಾಟಲಿಗೀಡಾಗಿದ್ದಾರೆ.

ಇನ್ನು ಅಕ್ರಮ ಮದ್ಯ ಮಾರಾಟದ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಿರುವ ಶಾಸಕ, ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದೆ. ಅದಕ್ಕೆ ಜನರು ಜಾಸ್ತಿ ಹಣ ನೀಡಿ ಖರೀದಿಸುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನ ಪರಿಗಣಿಸಿ ಮದ್ಯದಂಗಡಿ ತೆರೆಯೋಕೆ ಅನುಮತಿ ನೀಡುವಂತೆ ಶಾಸಕ ಭರತ್ ಸಿಂಗ್‌ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT