ಬೆಂಗಳೂರು ಸೇರಿದಂತೆ ಎಲ್ಲಾ ಮೆಟ್ರೋ ನಗರಗಳು ರೆಡ್ ಜೋನ್ ಗೆ 
ದೇಶ

ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಮೆಟ್ರೋ ನಗರಗಳು ರೆಡ್ ಜೋನ್ ಗೆ: ಕೆಂಪು, ಕಿತ್ತಳೆ, ಹಸಿರು ವಲಯಗಳ ಹೊಸ ಪಟ್ಟಿ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ

ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ನಾನಾ ಜಿಲ್ಲೆಗಳನ್ನು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳೆಂದು ವರ್ಗೀಕರಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಂಆಡಿದೆ  ದೆಹಲಿ, ಮುಂಬೈ, ಚೆನ್ನೈ, ಕೋಲ್ಕತಾ  ಬೆಂಗಳುರು ಸೇರಿದಂತೆ ಎಲ್ಲಾ ಮೆಟ್ರೋ ನಗರಗಳನ್ನು. ಕೆಂಪು ವಲಯ (ರೆಡ್ ಜೋನ್) ನಲ್ಲಿರಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ 

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ನಾನಾ ಜಿಲ್ಲೆಗಳನ್ನು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳೆಂದು ವರ್ಗೀಕರಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ  ದೆಹಲಿ, ಮುಂಬೈ, ಚೆನ್ನೈ, ಕೋಲ್ಕತಾ  ಬೆಂಗಳುರು ಸೇರಿದಂತೆ ಎಲ್ಲಾ ಮೆಟ್ರೋ ನಗರಗಳನ್ನು. ಕೆಂಪು ವಲಯ (ರೆಡ್ ಜೋನ್) ನಲ್ಲಿರಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ

ರೆಡ್ ಜೋನ್ ಗೆ ಸೇರಿದ ನಗರಗಳಲ್ಲಿ ಹೈದರಾಬಾದ್ ಮತ್ತು ಅಹಮದಾಬಾದ್  ಸಹ ಇದ್ದು ಮೇ 3 ರ ನಂತರ ಲಾಕ್‌ಡೌನ್ ತೆಗೆಯುವ  ಯೋಜನೆಯನ್ನು ಅಂತಿಮಗೊಳಿಸಲು ಈ ಪಟ್ಟಿ ಕೇಂದ್ರಕ್ಕೆ ನೆರವಾಗಲಿದೆ. ಇದರಿಂದ ಕೆಲ ಪ್ರದೇಶಗಳಲ್ಲಿ ವ್ಯಾಪಾರ ವ್ಯವಹಾರಗಳಿಗೆ ಅನುಕೂಲವಾಗಲಿದೆಯೆ, ಅಥವಾ ಚಟುವಟಿಕೆಗಳ ಮೇಲಿನ ಕಂಬಳ ನಿಷೇಧ ಮುಂದುವರಿಯುತ್ತದೆಯೇ ಎನ್ನುವುದನ್ನು ನೋಡಬೇಕಿದೆ.

ಜಿಲ್ಲೆಗಳನ್ನು ರೆಡ್ ಜೋನ್ ಆರೆಂಜ್ ಜೋನ್ ಹಾಗೂ ಗ್ರೀನ್ ಜೋನ್ ಎಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಹೊಸ ವರ್ಗೀಕರಣದ ಪ್ರಕಾರ, ಇಲ್ಲಿಯವರೆಗೆ ಯಾವುದೇ ಕೊರೋನಾ ಪ್ರಕರಣಗಲು ವರದಿಯಾಗದ ಥವಾ ಕಳೆದ 21 ದಿನಗಳಲ್ಲಿ  (28 ದಿನಗಳ ಬದಲು) ಯಾವ ಹೊಸ ಪ್ರಕರಣಗಳು ಕಂಡುಬರದ  ಜಿಲ್ಲೆಯನ್ನು ಗ್ರೀನ್ ಜೋನ್ ಎಂದು ಹೆಸರಿಸಲಾಗುತ್ತದೆ.  

ಮಹಾರಾಷ್ಟ್ರ 10,000 ಕೊರೋನಾ ಕರಣಗಳನ್ನು ದಾಟಿದ್ದು, ದೇಶದ ಅತಿ ಹೆಚ್ಚು ಎಂದರೆ 14 ಜಿಲ್ಲೆಗಳನ್ನು ರೆಡ್ ಜೋನ್ ಗೆ ಸೇರ್ಪಡಿಸಿದೆ.  ದೆಹಲಿಯಲ್ಲಿ 11 ಜಿಲ್ಲೆಗಳು, ತಮಿಳುನಾಡಿನಲ್ಲಿ 12 ಜಿಲ್ಲೆಗಳು, ಉತ್ತರ ಪ್ರದೇಶದ 19 ಜಿಲ್ಲೆಗಳು, ಪಶ್ಚಿಮ ಬಂಗಾಳದ 10 ಜಿಲ್ಲೆಗಳು, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ತಲಾ 9 ಜಿಲ್ಲೆಗಳು ಮತ್ತು ರಾಜಸ್ಥಾನದ 8 ಜಿಲ್ಲೆಗಳು ಕರ್ನಾಟಕದ 3 ಜಿಲ್ಲೆಗಳು ರೆಡ್ ಜೋನ್ ವ್ಯಾಪ್ತಿಯಲ್ಲಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT