ರೈಲು ಬೋಗಿ ಶುಚಿಗೊಳಿಸುತ್ತಿರುವ ಕಾರ್ಮಿಕ 
ದೇಶ

ವಲಸೆ ಕಾರ್ಮಿಕರು, ವಿದ್ಯಾರ್ಥಿಗಳಿಗಾಗಿ 'ಶ್ರಮಿಕ ವಿಶೇಷ ರೈಲು' ಆರಂಭಿಸಿದ ರೈಲ್ವೆ

ಭಾರತೀಯ ರೈಲ್ವೆ ವಿಶ್ವ ಕಾರ್ಮಿಕರ ದಿನದಂದೆ ಕೊವಿಡ್-19 ಲಾಕ್ ಡೌನ್ ನಿಂದಾಗಿ ದೇಶದ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳುವುದಕ್ಕಾಗಿ ಶ್ರಮಿಕ ವಿಶೇಷ ರೈಲು ಆರಂಭಿಸಿದೆ.

ಪಾಟ್ನಾ: ಭಾರತೀಯ ರೈಲ್ವೆ ವಿಶ್ವ ಕಾರ್ಮಿಕರ ದಿನದಂದೆ ಕೊವಿಡ್-19 ಲಾಕ್ ಡೌನ್ ನಿಂದಾಗಿ ದೇಶದ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳುವುದಕ್ಕಾಗಿ ಶ್ರಮಿಕ ವಿಶೇಷ ರೈಲು ಆರಂಭಿಸಿದೆ.

ಲಾಕ್ ಡೌನ್ ನಿಂದ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಯಾತ್ರಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರೆ ವ್ಯಕ್ತಿಗಳು ಸಹ ಈ ವಿಶೇಷ ರೈಲಿನಲ್ಲಿ ಪ್ರಯಾಣಿಸಬಹುದು.

ಸಂಬಂಧಪಟ್ಟ ರಾಜ್ಯ ಸರ್ಕಾರಗಳ ಮನವಿ ಮೇರಗೆ ಈ ವಿಶೇಷ ರೈಲು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಂಚರಿಸಲಿದೆ ಎಂದು ಭಾರತೀಯ ರೈಲ್ವೆಯ ಕಾರ್ಯಕಾರಿ ನಿರ್ದೇಶಕ ರಾಜೇಶ್ ದತ್ ಬಾಜ್ಪಾಯಿ ಅವರು ತಿಳಿಸಿದ್ದಾರೆ.

ಶ್ರಮಿಕ ವಿಶೇಷ ರೈಲಿನ ಸುಗಮ ಸಂಚಾರಕ್ಕಾಗಿ ರಾಜ್ಯ ಸರ್ಕಾರಗಳು ಮತ್ತು ರೈಲ್ವೆ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಿವೆ. ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿಯೊಬ್ಬ ಪ್ರಯಾಣಿಕ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರಕ್ಕೆ ಪ್ರಯಾಣಿಕರು ಸಹಕರಿಸಬೇಕು ಎಂದು ರೈಲ್ವೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT