ಸಾಂದರ್ಭಿಕ ಚಿತ್ರ 
ದೇಶ

ಭಾರತೀಯರು ಮುಸ್ಲಿಂ ವಿರೋಧಿಗಳು ಎಂದು ಅರಬರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ:ವಿದೇಶಾಂಗ ಇಲಾಖೆ

ಕೊರೋನಾ ವೈರಸ್ ತಡೆಗಟ್ಟಲು ಭಾರತ ದೇಶದ ಹಲವು ಭಾಗಗಳಲ್ಲಿ ಮುಸಲ್ಮಾನರ ವಿರುದ್ಧ ಕಿರುಕುಳ ನೀಡಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅರಬ್ ದೇಶ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಭಾರತ ಪ್ರತಿಪಾದಿಸಿದೆ.

ನವದೆಹಲಿ: ಕೊರೋನಾ ವೈರಸ್ ತಡೆಗಟ್ಟಲು ಭಾರತ ದೇಶದ ಹಲವು ಭಾಗಗಳಲ್ಲಿ ಮುಸಲ್ಮಾನರ ವಿರುದ್ಧ ಕಿರುಕುಳ ನೀಡಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅರಬ್ ದೇಶ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಭಾರತ ಪ್ರತಿಪಾದಿಸಿದೆ.

ಈ ಆರೋಪವನ್ನು ಸ್ಪಷ್ಟವಾಗಿ ಅಲ್ಲಗಳೆದಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅನುರಾಗ್ ಶ್ರೀವಾಸ್ತವ್, ಗಲ್ಫ್ ರಾಷ್ಟ್ರಗಳ ಜೊತೆ ಭಾರತ ಉತ್ತಮ ಬಾಂಧವ್ಯ ಇರಿಸಿಕೊಳ್ಳಲು ಬದ್ಧವಾಗಿದ್ದು ಕೋವಿಡ್-19 ನಂತರ ಕೈಗೊಳ್ಳಬೇಕಾದ ಆರ್ಥಿಕ ಪುನಶ್ಚೇತನಕ್ಕೆ ಗಲ್ಫ್ ರಾಷ್ಟ್ರಗಳ ಜೊತೆ ಮಾತುಕತೆಗೆ ಸಹ ಸಿದ್ದ ಎಂದು ಹೇಳಿದ್ದಾರೆ.

ಗಲ್ಫ್ ರಾಷ್ಟ್ರಗಳೊಂದಿಗಿನ ಆಳವಾದ ಉತ್ತಮ ಬಾಂಧವ್ಯ ಇರುವುದರಿಂದಾಗಿಯೇ ರಂಜಾನ್ ಸಮಯದಲ್ಲಿ ಅಲ್ಲಿಗೆ ಅಗತ್ಯ ಆಹಾರ ವಸ್ತುಗಳನ್ನು ಭಾರತ ಪೂರೈಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರ. ಇಂತಹ ಸುಳ್ಳು ಟ್ವೀಟ್ ಗಳ ಮೂಲಕ ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಹಾಳು ಮಾಡಲು ಸಾಧ್ಯವಿಲ್ಲ. ನಮ್ಮ ಸಂಬಂಧದ ವಾಸ್ತವ ಚಿತ್ರಣ ಬೇರೆಯದ್ದೇ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT