ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ನಗರ ಪ್ರದೇಶಗಳ ಭಾರತೀಯರಲ್ಲಿ ಹೆಚ್ಚಿನ ಆತಂಕ; ನಿರುದ್ಯೋಗ ಸಮಸ್ಯೆ, ಅಪರಾಧ ಹೆಚ್ಚಳ ಸಾಧ್ಯತೆ

ಕೊರೋನಾ ವೈರಸ್ ನಗರ ಪ್ರದೇಶಗಳ ಜನರಲ್ಲಿ ಹೆಚ್ಚು ಆತಂಕ ತಂದೊಡ್ಡಿದೆ. ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆಯೊಂದು ಹೇಳಿದೆ.

ನವದೆಹಲಿ: ಕೊರೋನಾ ವೈರಸ್ ನಗರ ಪ್ರದೇಶಗಳ ಜನರಲ್ಲಿ ಹೆಚ್ಚು ಆತಂಕ ತಂದೊಡ್ಡಿದೆ. ನಿರುದ್ಯೋಗ, ಬಡತನ, ಅಸಮಾನತೆ ಗಳು ಹೆಚ್ಚಾಗಲಿವೆ ಎಂದು ಜಾಗತಿಕ ಮಟ್ಟದ ಸಮೀಕ್ಷೆಯೊಂದು ಹೇಳಿದೆ.

ಆದರೆ ಭಾರತ ದೇಶ ಸರಿಯಾದ ದಿಕ್ಕಿನತ್ತ ಸಾಗುತ್ತಿದೆ ಎಂದು ಸಮೀಕ್ಷೆ ಹೇಳಿದೆ. ಇಪ್ಸೊಸ್ ನಡೆಸಿದ ವಾಟ್ ವರೀಸ್ ದ ವರ್ಲ್ಡ್ ಎಂಬ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದಲ್ಲಿ ಜನರಿಗೆ ಕೋವಿಡ್-19 ಆತಂಕ ತಂದೊಡ್ಡಿದ್ದು ಶೇಕಡಾ 61ರಷ್ಟು ಮಂದಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಹೇಳಿದೆ.

ತಮ್ಮ ಜೀವನದಲ್ಲಿ ಆತಂಕಕ್ಕೆ ಏನು ಕಾರಣಗಳು ಎಂದು ಕೇಳಿದಾಗ ಶೇಕಡಾ 62ರಷ್ಟು ಮಂದಿ ಕೋವಿಡ್-19 ಎಂದರೆ, ಶೇಕಡಾ 38ರಷ್ಟು ಮಂದಿ ನಿರುದ್ಯೋಗ ಸಮಸ್ಯೆ, ಶೇಕಡಾ 24ರಷ್ಟು ಮಂದಿ ಅಪರಾಧ ಮತ್ತು ಹಿಂಸಾಚಾರ ಮತ್ತು ಶೇಕಡಾ 21ರಷ್ಟು ಮಂದಿ ಬಡತನ ಮತ್ತು ಸಾಮಾಜಿಕ ಅಸಮಾನತೆ ಎಂದಿದ್ದಾರೆ.

ಭಾರತದಲ್ಲಿ ಮಾತ್ರ ಶೇಕಡಾ 65ರಷ್ಟು ಮಂದಿ ದೇಶ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದಿದ್ದಾರೆ. 28 ದೇಶಗಳಲ್ಲಿ ಇಪ್ಸೋಸಿಸ್ ಆನ್ ಲೈನ್ ತಂಡ ವ್ಯವಸ್ಥೆ ಮೂಲಕ ಸಮೀಕ್ಷೆ ನಡೆಸಲಾಗಿದೆ.

ಅರ್ಜೆಂಟೈನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಗ್ರೇಟ್ ಬ್ರಿಟನ್, ಜರ್ಮನಿ, ಭಾರತ, ಇಸ್ರೇಲ್, ಇಟಲಿ, ಜಪಾನ್, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ, ಸ್ಪೈನ್, ಸ್ವೀಡನ್, ಟರ್ಕಿ ಮತ್ತು ಅಮೆರಿಕ ದೇಶಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.

ಒಟ್ಟು 19 ಸಾವಿರದ 505 ಸಂದರ್ಶನಗಳನ್ನು ಮಾರ್ಚ್ 20ರಿಂದ ಏಪ್ರಿಲ್ 3ರ ನಡುವೆ ನಡೆಸಲಾಗಿದ್ದು 18ರಿಂದ 74 ವರ್ಷದೊಳಗಿನವರು ಅಮೆರಿಕ, ದಕ್ಷಿಣ ಆಫ್ರಿಕಾ, ಟರ್ಕಿ, ಇಸ್ರೇಲ್ ಮತ್ತು ಕೆನಡ ಮತ್ತು ಇತರ ದೇಶಗಳಲ್ಲಿ 16ರಿಂದ 74 ವರ್ಷದೊಳಗಿನವರು ಭಾಗವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT