ಸಂಗ್ರಹ ಚಿತ್ರ 
ದೇಶ

ಕೊವಿಡ್-19: ಕಾಶ್ಮೀರ ಕಣಿವೆಯ ಎಲ್ಲಾ 10 ಜಿಲ್ಲೆಗಳು ರೆಡ್ ಜೋನ್: ರಾಜ್ಯಾಡಳಿತ ಘೊಷಣೆ

ಕಾಶ್ಮೀರ ಕಣಿವೆಯ ಕೇವಲ ನಾಲ್ಕು ಜಿಲ್ಲೆಗಳು ಕೆಂಪು ವಲಯಗಳೆಂದು ಕೇಂದ್ರ ಆರೋಗ್ಯ ಸಚಿವಾಲಯ ವರ್ಗೀಕರಿಸಿದ್ದರೂ ಸಹ ರಾಜ್ಯ ಆಡಳಿತಗಳು ಇಡೀ ಕಾಶ್ಮೀರ ಕಣಿವೆಯನ್ನು ಕೆಂಪು ವಲಯಗಳಾಗಿ ಪರಿಗಣಿಸಿವೆ. 

ಶ್ರೀನಗರ: ಕಾಶ್ಮೀರ ಕಣಿವೆಯ ಕೇವಲ ನಾಲ್ಕು ಜಿಲ್ಲೆಗಳು ಕೆಂಪು ವಲಯಗಳೆಂದು ಕೇಂದ್ರ ಆರೋಗ್ಯ ಸಚಿವಾಲಯ ವರ್ಗೀಕರಿಸಿದ್ದರೂ ಸಹ ರಾಜ್ಯ ಆಡಳಿತ ಇಡೀ ಕಾಶ್ಮೀರ ಕಣಿವೆಯನ್ನು ಕೆಂಪು ವಲಯಗಳಾಗಿ ಪರಿಗಣಿಸಿವೆ.

ಇದರಿಂದ ಇಡೀ ಕಣಿವೆಯಲ್ಲಿ ನಿರ್ಬಂಧಗಳಲ್ಲಿ ಸಡಿಲಿಕೆ ಇರುವುದಿಲ್ಲ. ಲಾಕ್‌ಡೌನ್ ಅವಧಿಯನ್ನು ಇನ್ನೂ ಎರಡು ವಾರ ವಿಸ್ತರಿಸಿ, ಹಸಿರು ವಲಯಗಳಲ್ಲಿ ಹೆಚ್ಚಿನ ಕಾರ್ಯಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಅವಕಾಶ ನೀಡಿದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಮುಂದಿನ ಆದೇಶ ಬರುವವರೆಗೆ ಕಾಶ್ಮೀರ ಕಣಿವೆಯ ಎಲ್ಲ 10 ಜಿಲ್ಲೆಗಳನ್ನು ಕೆಂಪು ವಲಯಗಳಾಗಿ ಪರಿಗಣಿಸಲಾಗಿದೆ ಎಂದು ಕಾಶ್ಮೀರ ವಿಭಾಗೀಯ ಆಯುಕ್ತ ಪಿ.ಕೆ.ಪೊಲೆ ಯುಎನ್‌ಐಗೆ ತಿಳಿಸಿದ್ದಾರೆ. 

ಕೊವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳು ಕೆಂಪು ವಲಯಗಳಾಗಿ ಘೋಷಿಸುವ ಇಂತಹ ಕ್ರಮಗಳು ಅಗತ್ಯವಾಗಿದೆ. ಕಣಿವೆಯಿಂದ ಹೊರಗಿರುವ ಕಾಶ್ಮೀರಿ ಜನರು ವಾಪಸ್ ಬರುವ ಹಿನ್ನೆಲೆಯಲ್ಲಿ ಹೆಚ್ಚು ಜಾಗರೂಕರಾಗಿರಬೇಕಾಗಿದೆ. ಕೆಂಪು ಮತ್ತು ಕಿತ್ತಳೆ ವಲಯಗಳಲ್ಲಿ ಸ್ವಲ್ಪ ವ್ಯತ್ಯಾಸವಿದೆ ಕಾಶ್ಮೀರ ಕಣಿವೆಯಲ್ಲಿ ಕೇವಲ ಪುಲ್ವಾಮ ಜಿಲ್ಲೆ ಹಸಿರು ವಲಯವಾಗಿತ್ತು. ಆದರೆ, ಈ ಜಿಲ್ಲೆಯಲ್ಲೂ ಕೊವಿಡ್-19 ಪ್ರಕರಣಗಳು ವರದಿಯಾಗಿವೆ. ಪುಲ್ವಾಮ ಜಿಲ್ಲೆಯಲ್ಲಿ ಸದ್ಯ ನಾಲ್ಕು ಸಕ್ರಿಯ ಪ್ರಕರಣಗಳಿವೆ ಎಂದು ಅವರು ಪಿ.ಕೆ.ಪೊಲೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT