ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹೂಮಳೆ ಸುರಿಸಿದ ಸೇನೆ 
ದೇಶ

ಕೊರೋನಾ ವಾರಿಯರ್ಸ್'ಗೆ ಸೆಲ್ಯೂಟ್ ಹೊಡೆದ ಸೇನೆ: ಪುಷ್ಪವೃಷ್ಟಿಯ ಮೂಲಕ ಗೌರವ

ದೇಶದಲ್ಲಿ ರಣಕೇಕೆ ಹಾಕುತ್ತಿರುವ ಕೊರೋನಾ ವಿರುದ್ಧ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದಿಟ್ಟ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಭಾರತೀಯ ಸೇನೆ ಭಾನುವಾರ ವಿಶೇಷ ಗೌರವ ಸಲ್ಲಿಸಿದೆ. 

ನವದೆಹಲಿ: ದೇಶದಲ್ಲಿ ರಣಕೇಕೆ ಹಾಕುತ್ತಿರುವ ಕೊರೋನಾ ವಿರುದ್ಧ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದಿಟ್ಟ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಭಾರತೀಯ ಸೇನೆ ಭಾನುವಾರ ವಿಶೇಷ ಗೌರವ ಸಲ್ಲಿಸಿದೆ. 

ಹೆಲಿಕಾಪ್ಟರ್ ಮೂಲಕ ಕೊರೋನಾ ವಾರಿಯರ್ಸ್ ಗಳ ಮೇಲೆ ಹೂಮಳೆ ಸುರಿಸುವ ಮೂಲಕ ಸೇನೆ ಗೌರವ ಸಲ್ಲಿಸಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗಳೂ ಕೂಡ ಈ ಗೌರವಕ್ಕೆ ಪಾತ್ರರಾಗಿದ್ದಾರೆ. 

ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತೀಯ ವಾಯುಸೇನೆಯ ವಿಮಾನಗಳು ಸಂಚರಿಸುವ ಮೂಲಕ ಕೊರೋನಾ ವಾರಿಯರ್ಸ್'ಗಳಿಗೆ ಗೌರವ ಸೂಚಿಸಿದೆ. 

ಕಳೆದ ಎರಡು ತಿಂಗಳುಗಳಿಂದ ಹಗಲು ರಾತ್ರಿ ಎನ್ನದೆ ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಪೊಲೀಸರು, ಪೌರಕಾರ್ಮಿಕರು, ಮಾಧ್ಯಮ ಪತ್ರಕರ್ತರು ಸೇರಿದಂತೆ ಹಲವು ಸಂಖ್ಯೆಯ ಸ್ವಯಂ ಸೇವಕರು ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ತಮ್ಮ ಕುಟುಂಬ ಹಾಗೂ ಸಂಸಾರದಿಂದ ದೂರ ಉಳಿದು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದರೆ. ಇವರೆಲ್ಲರೂ ಈ ಗೌರವಕ್ಕೆ ಅರ್ಹರಾಗಿದ್ದಾರೆ. 

ಈ ನಡುವೆ ವಿಧಾನಸೌಧದ ಮೇಲೂ ವಾಯುಸೇನೆ ಹೂಮಳೆ ಸುರಿಸಲಿದೆ. ಇಂದು ಮಧ್ಯಾಹ್ನ 3.30ರಿಂಗ 4 ಗಂಟೆ ಒಳಗಾಗಿ ಪುಷ್ಪವೃಷ್ಟಿ ಮೂಲಕ ಕೊರೋನಾ ವಾರಿಯರ್ಸ್'ಗೆ ವಿಶೇಷ ಗೌರವ ಸಲ್ಲಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT